i
ಸಿದ್ದೇಶ್ ಯಾದವ್ ನಿಧನ ಸಮಾಜ ಮತ್ತು ಬಿಜೆಪಿ ಪಕ್ಷಕ್ಕೆ ತುಂಬಲಾರದ ನಷ್ಟ: ಮಾಜಿ ಶಾಸಕಿ ಪೂರ್ಣಿಮಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: partyಜಿಲ್ಲಾ ಬಿಜೆಪಿ ಮುಖಂಡರಾದ ಸಿದ್ದೇಶ್ ಯಾದವ್ ರವರು ಸರಳ, ಸಜ್ಜನಿಕೆಯ, ಜನಸ್ನೇಹಿ ವ್ಯಕ್ತಿತ್ವವುಳ್ಳವರಾಗಿದ್ದು, ಬಿಜೆಪಿ ಪಕ್ಷದ ಯಾವುದೇ ಕೆಲಸವಾದರೂ ಶ್ರದ್ಧೆಯಿಂದ ಮುತುವರ್ಜಿ ವಹಿಸಿ ಮಾಡುತ್ತಿದ್ದರು, ಸಿದ್ದೇಶ್ ಯಾದವ್ ರವರ ನಿಧನ ನಮ್ಮ ಬಿಜೆಪಿ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂಬುದಾಗಿ ಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.ಜಿಲ್ಲಾ ಬಿಜೆಪಿ ಮುಖಂಡರಾದ ಸಿದ್ದೇಶ್ ಯಾದವ್ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಎಂ.ಎಲ್.ಸಿ ಜಯಮ್ಮ, ಹಾಗೂ ದಿವಂಗತ ಸಿದ್ದೇಶ್ ಯಾದವ್ ರವರ ಕುಟುಂಬಸ್ಥರು ಹಾಗೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.