i
ಶಿರಸ್ತೇದಾರ್ 1.50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಶಿವಮೊಗ್ಗ ತಾಲ್ಲೂಕು ಕಛೇರಿಯ ಶಿರಸ್ತೇದಾರ್ ಖಾತೆ ಬದಲಾವಣೆಗೆ 1.50 ಲಕ್ಷ ಪಡೆಯುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿರಸ್ತೇದಾರ್ ಅರುಣ್ ಕುಮಾರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಲಂಚ ಪಡೆಯುವಾಗ ಲಂಚ ಹಣದೊಂದಿಗೆ ಬಂಧಿಸಿದ್ದಾರೆ.
ಖಾತೆ ಬದಲಾವಣೆಗಾಗಿ ಶಿವಮೊಗ್ಗ ವಿನಾಯಕ ನಗರದ ನಿವಾಸಿ ಹನುಮಂತ ಆರ್ ಬನ್ನಿಗೋಡ್ ಎಂಬ ಯುವಕ ತಾಲ್ಲೂಕು ಕಛೇರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದರು ಆದರೆ ಇದಕ್ಕೆ 1.50 ಲಕ್ಷ ಲಂಚಕ್ಕೆ ಭೇಡಿಕೆ ಇಡಲಾಗಿತ್ತು ಇದರಿಂದ ನೊಂದು ಅವರು ಲೋಕಾಯುಕ್ತ ಕಛೇರಿಗೆ ಹೋಗಿ ದೂರು ನೀಡಿದ್ದರು. ಅದರಂತೆ ಸೋಮವಾರ ಮಧ್ಯಾಹ್ನ 12.30 ರಲ್ಲಿ ಲೋಕಾಯುಕ್ತ ಪೊಲೀಸರು ತಾಲ್ಲೂಕು ಕಛೇರಿಯ ಮೇಲೆ ದಾಳಿ ಮಾಡಿ ಲಂಚ ಸ್ವೀಕರಿಸುವಾಗ ಶಿರಸ್ತೇದಾರ್ ಅರುಣ್ ಕುಮಾರ್ ಬಂಧಿಸಿ ಮುಂದಿನ ತನಿಖೆ ನಡೆಸಲಾಗುತ್ತಿದೆ.