i
ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಚಾಲಕನ ನಿಯಂತ್ರಣ ತಪ್ಪಿ ಗಿಡ್ಡಪುರ ಬಳಿ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ
ಪ್ರಾಣಪಾಯದಿಂದ ಪಾರಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ಶನಿವಾರ ಘಟನೆ ಜರುಗಿದ್ದು ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ರೀತಿಯ ಜೀವ ಹಾನಿ ಆಗಿರುವುದಿಲ್ಲ.
ನಾಯಕನಹಟ್ಟಿ ಕಡೆಯಿಂದ ಗರಣಿ ಕ್ರಾಸ್ ಕಡೆಗೆ ಖಾಸಗಿ ಬಸ್ ತೆರಳುತ್ತಿದ್ದ ವೇಳೆ ಎದುರುಗಡೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.
ಬಸ್ ಪಲ್ಟಿ ಪ್ರಕರಣದಲ್ಲಿ ಸಣ್ಣ ಪುಟ್ಟ ಗಾಯಗೊಂಡಿದ್ದ ಎಲ್ಲ ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ನಾಯಕನಹಟ್ಟಿ ಪಿಎಸ್ಐ ದೇವರಾಜ್ ಭೇಟಿ ಪರಿಶೀಲನೆ ಮಾಡಿದ್ದಾರೆ. ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.