i
ಎಐಸಿಸಿ ತಂಡಕ್ಕೆ ಭವ್ಯ ನರಸಿಂಹಮೂರ್ತಿ, ಖರ್ಗೆಗೆ ಅಭಿನಂದನೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷದ ಎಐಸಿಸಿ ಸೋಷಿಯಲ್ ಮೀಡಿಯಾ ತಂಡವನ್ನು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪುನರ್ ರಚಿಸಿದ್ದು ಬೆಂಗಳೂರಿನ ಭವ್ಯ ನರಸಿಂಹಮೂರ್ತಿ ಅವರಿಗೆ ಸ್ಥಾನ ನೀಡಿದ್ದಾರೆ.
ಎಐಸಿಸಿ ಸೋಷಿಯಲ್ ಮೀಡಿಯಾದ ರಾಷ್ಟ್ರೀಯ ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕ ರಾಜ್ಯದಿಂದ ಭವ್ಯ ನರಸಿಂಹಮೂರ್ತಿ ಅವರಿಗೆ ಖರ್ಗೆ ಸ್ಥಾನ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿರುವ ರಾಷ್ಟ್ರ ಮಟ್ಟದ 37 ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ಭವ್ಯ ನರಸಿಂಹಮೂರ್ತಿ ಅವರು ಇದ್ದಾರೆ. ಭವ್ಯ ಅವರು ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದರು. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಅವರು ಸಾಕಷ್ಟು ಸಕ್ರಿಯಾರಾಗಿದ್ದು ಕಾಂಗ್ರೆಸ್ ಪಕ್ಷವನ್ನು ರಚನಾತ್ಮಕವಾಗಿ ಸಂಘಟಿಸಿದ್ದರು.
ರಾಷ್ಟ್ರ ಮಟ್ಟದ 37 ಸಮನ್ವಯಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ದೊರೆತಿರುವುದಕ್ಕೆ ಭವ್ಯ ನರಸಿಂಹಮೂರ್ತಿ ಅವರು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.