i
ಸರ್ಕಾರಿ ಶಾಲೆಯ 185 ಮಕ್ಕಳಿಗೆ ಕಲಿಕಾ ಪರಿಕರಗಳನ್ನು ವಿತರಣೆ ಮಾಡಿದ ಆಂಜನೇಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ಅತ್ಯಂತ ಬಡತದಲ್ಲಿದ್ದು ಅಂತಹ ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಕಲಿಕಾ ಪರಿಕರಗಳನ್ನು ನೀಡಲಾಗಿದ್ದು ಸದ್ಬಳಕೆ ಮಾಡಿಕೊಳ್ಳುವಂತೆ ಯೂತ್ ಫಾರ್ ಸೇವಾ ಜಿಲ್ಲಾ ಸಂಯೋಜಕ ಮದಕರಿಪುರ ಸಿ.ಆಂಜನೇಯ ಕರೆ ನೀಡಿದರು.
ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಟೆಕ್ಸಾಸ್ ಸಂಸ್ಥೆ ಹಾಗೂ ಯೂತ್ ಫಾರ್ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮದಕರಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 185 ಮಕ್ಕಳಿಗೆ ಕಲಿಕಾ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.ಮದಕರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದರಿಂದ ಏಳನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಬುಕ್, ಬ್ಯಾಗ್, ಜಮೀಟ್ರಿ ಬಾಕ್ಸ್ ಇತರೆ ಕಲಿಕಾ ಪರಿಕರಗಳನ್ನು ವಿತರಿಸಿದ್ದು ಮಕ್ಕಳು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಕಲಿಯಬೇಕೆಂದು ಅವರು ಕರೆ ನೀಡಿದರು. ಇಂದಿನ ಜಾಗತಿಕ ಯುಗದಲ್ಲಿ ವಿಶ್ವ ಒಂದು ಹಳ್ಳಿಯಾಗುತ್ತಿದ್ದರೂ ಬಡವರು ಕಡುಬಡತನದಲ್ಲಿಯೇ ಜೀವನ ಸವೆಸುತ್ತಿದ್ದಾರೆ. ಇಂತಹ ಕುಟುಂಬಗಳ ವಿದ್ಯಾರ್ಥಿಗಳು ಇಂದಿಗೂ ಸಹ ನೋಟ್ ಪುಸ್ತಕ ಮತ್ತಿತರ ಸಲಕರಣೆಗಳನ್ನು ಕೊಳ್ಳುವುದು ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಕ್ಲಬ್ ಮಹೀಂದ್ರದಂತಹ ರೆಸಾರ್ಟ್ಗಳು ಗ್ರಾಮೀಣ ಬಡ ವಿದ್ಯಾರ್ಥಿಗಳ ವಿದ್ಯಾರ್ಜನೆಗಾಗಿ ನೋಟ್ ಪುಸ್ತಕ, ಬ್ಯಾಗ್ ವಿತರಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ದಂತ ವೈದ್ಯರಾದ ಡಾ.ಸುನೀಲ್ ಮಾತನಾಡಿ ಶಾಲಾ ಮಕ್ಕಳಿಗೆ ಅದರಲ್ಲೂ ಸರ್ಕಾರಿ ಶಾಲಾ ಮಕ್ಕಳಿಗೆ ಈ ರೀತಿಯ ಉಚಿತವಾದ ಕಲಿಕಾ ಪರಿಕರಗಳನ್ನು ವಿತರಣೆ ಮಾಡುವುದರಿಂದ ಅನುಕೂಲವಾಗಲಿದೆ. ನಾವು ಸಹ ಮುಂದಿನ ದಿನಗಳಲ್ಲಿ ಉಚಿತವಾಗಿ ಆರೋಗ್ಯ ಕ್ಯಾಂಪ್ ಮಾಡುವ ಮೂಲಕ ಮಕ್ಕಳ ಆರೋಗ್ಯ ರಕ್ಷಣೆಗೆ ಒತ್ತು ನೀಡುತ್ತೇವೆಂದು ಹೇಳಿದರು.
ದಕ್ಷಿಣ ಕರ್ನಾಟಕ ಸಂಯೋಜಕ ಬಾಲಸುಬ್ರಮಣ್ಯಂ, ಸಮಾಜ ಸೇವಕ ಗರಡಿ ಪ್ರಕಾಶ್, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವೆಂಕಟೇಶ್, ಮುಖ್ಯ ಶಿಕ್ಷಕಿ ರೇಖಾ, ಸಹ ಶಿಕ್ಷಕರು ಸೇರಿದಂತೆ ಟೆಕ್ಸಾಸ್ ಸಂಸ್ಥೆಯ ಸ್ವಯಂ ಸೇವಕರ ದಿಕ್ಷೀತ್ ಕುಮಾರ್ ಹಾಗೂ ಆ ತಂಡದ ಸ್ವಯಂ ಸೇವಕರು ಪಾಲ್ಗೊಂಡಿದ್ದರು.