i
ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷ ಮೋದಿ ಅವರಂತೆ ಭ್ರಷ್ಟ ರಹಿತ ಆಡಳಿತ ನೀಡಲು ಸಾಧ್ಯವೇ- ಮಾಜಿ ಸಚಿವ ಅಶ್ವತ್ ನಾರಾಯಣ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವಂತೆಯೇ ದೇಶದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುವಂತೆ ಪ್ರಧಾನಿ ನರೇಂದ್ರ ನೋದಿ ಅವರಿಗೆ ಸವಾಲ್ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನರೇಂದ್ರ ಮೋದಿ ಅವರಂತೆ ಕಾಂಗ್ರೆಸ್ ಪಕ್ಷ, ನೀವು ಭ್ರಷ್ಟ ರಹಿತ ಆಡಳಿತ ನೀಡಲು ಸಾಧ್ಯವೇ ಎಂದು ಮಾಜಿ ಸಚಿವ ಸಿ.ಎಸ್.ಅಶ್ವತ್ ನಾರಾಯಣ ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.
ಅವರು ಟ್ವೀಟ್ ಮಾಡಿ ಸಿದ್ದರಾಮಯ್ಯನವರ ಸವಾಲ್ ಗೆ ಪ್ರತಿಕ್ರಿಯೆ ನೀಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ತಿಂಗಳು ಕಳೆಯುವುದರೊಳಗೆ ವರ್ಗಾವಣೆ ದಂಧೆ ಶುರುವಾಗಿದೆ. ಭ್ರಷ್ಟಾಚಾರ, ರೈತರ ಆತ್ಮಹತ್ಯೆ, ಅಮಾಯಕರ ಕೊಲೆ ಪ್ರಕರಣಗಳು ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಹೊಸ ಯೋಜನೆಗಳ ಜಾರಿಗೆ ಅನುದಾನದ ಕೊರತೆ ಉಂಟಾಗಿದೆ ಎಂದು ನಿಮ್ಮವರೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.ನಿಮ್ಮಿಂದ(ಸಿಎಂ ಸಿದ್ದರಾಮಯ್ಯ) ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಸಾಧ್ಯವೇ?, ರೈತರಿಗೆ ನ್ಯಾಯ ಕೊಡಿಸಲು ಸಾಧ್ಯವೇ? ಪಾರದರ್ಶಕ ಆಡಳಿತ ನಡೆಸಲು ಸಾಧ್ಯವೇ? ರಾಜ್ಯದ ಅಭಿವೃದ್ಧಿ ಸಾಧ್ಯವೇ? ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವೇ? ಇವನ್ನೆಲ್ಲ ದೇಶದ ಮಟ್ಟದಲ್ಲಿ ನಮ್ಮ ಪ್ರಧಾನಿಯವರು ಮಾಡಿ ತೋರಿಸಿದ್ದಾರೆ.ಇನ್ನೊಬ್ಬರಿಗೆ ಸವಾಲ್ ಹಾಕುವ ಮುನ್ನ ನಿಮ್ಮ ಸರ್ಕಾರದ ಗೊತ್ತು ಗುರಿಯಿಲ್ಲದ, ರಾಜಕೀಯ ದ್ವೇಷಪೂರಿತ ಆಡಳಿತ ರಾಜ್ಯದ ಸ್ಥಿತಿಯನ್ನು ಎಲ್ಲಿಗೆ ಕೊಂಡೊಯ್ಯುತ್ತಿದೆ ಎಂಬುದನ್ನು ಒಮ್ಮೆ ಯೋಚಿಸಿ ನೋಡಿ ಎಂದು ಸಿಎಂಗೆ ಅಶ್ವತ್ ನಾರಾಯಣ ತಾಕೀತು ಮಾಡಿದ್ದಾರೆ.