i
ಪ್ರಾಥಮಿಕ ಕೃಷಿ ಸಹಕಾರ ಸಂಘದ ಸೊಸೈಟಿ ಅಧ್ಯಕ್ಷರಾಗಿ ಕೆ.ಆರ್.ಹಳ್ಳಿ ರವಿ ಅವಿರೋಧ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘ ನಿಯಮಿತ ಸೊಸೈಟಿಯ ಅಧ್ಯಕ್ಷರಾಗಿ ಕೆ.ಆರ್.ಹಳ್ಳಿ ರವಿ, ಉಪಾಧ್ಯಕ್ಷರಾಗಿ ಹನುಮಂತಪ್ಪ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಈ ಇಬ್ಬರನ್ನು ಅಧ್ಯಕ್ಷ-ಉಪಾಧ್ಯಕ್ಷರನ್ನಾಗಿ ಆಯ್ಕೆ ಆಗಿದ್ದಾರೆ ಎಂದು ಜವಗೊಂಡನಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘ ನಿಯಮಿತ ಸೊಸೈಟಿ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭಿನಂದನೆ- ಅಧ್ಯಕ್ಷರಾಗಿ ಕೆ.ಆರ್.ಹಳ್ಳಿ ರವಿ, ಉಪಾಧ್ಯಕ್ಷರಾಗಿ ಹನುಮಂತಪ್ಪ ಅವರುಗಳು ಅವಿರೋಧ ಆಯ್ಕೆಯಾಗಿರುವುದಕ್ಕೆ ಹಿರಿಯೂರು ನಗರಸಭೆ ಮಾಜಿ ಸದಸ್ಯ ಡಿಶ್ ಜಿ.ಪ್ರೇಮ್ ಕುಮಾರ್ ಅಭಿನಂದಿಸಿ ರೈತ ಪರವಾದ ಆಡಳಿತ ನೀಡುವಂತೆ ಆರೈಸಿದ್ದಾರೆ.