i
ಎಲ್ಇಪಿ ಬ್ಯಾಟರಿ ಸೆಲ್ ಉತ್ಪಾದನೆಯ ಭೂಮಿ ಪೂಜೆ ನೆರವೇರಿಸಿದ ಡಿಸಿಎಂ…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಚಾಮರಾಜನಗರದ ಬದನಗುಪ್ಪೆ-ಕಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ನಡೆದ ಎ1 ಸಂಯೋಜಿತ ಎಲ್ಇಪಿ ಬ್ಯಾಟರಿ ಸೆಲ್ ಉತ್ಪಾದನೆಯ ಟೆಕ್ರೆನ್ ಬ್ಯಾಟರಿ ಪ್ರೈವೆಟ್ ಲಿಮಿಟೆಡ್ ಕಾರ್ಖಾನೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿ, ಮಾತನಾಡಿದರು.ಈ ಹಿಂದೆ ನಾನು ಇಂಧನ ಸಚಿವನಾಗಿದ್ದಾಗ ವಿದ್ಯುತ್ ಸಮಸ್ಯೆ ನಿವಾರಿಸುವುದು ಕಷ್ಟ ಎಂದು ಅನೇಕರು ಸಲಹೆ ನೀಡಿದ್ದರು. ಯಾವುದು ಮಾಡಲು ಸಾಧ್ಯವಿಲ್ಲ ಅದನ್ನು ಸಾಧಿಸಬೇಕು ಎಂಬ ಛಲ ಇರಬೇಕು. ಇಂಧನ ಸಚಿವನಾಗಿದ್ದ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸ್ಥಾಪಿಸಿದ ‘ಸೋಲಾರ್ ಪಾರ್ಕ್‘ ಯೋಜನೆ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಎಂಬ ಹೆಗ್ಗಳಿಕೆಯನ್ನು ಗಳಿಸಿದೆ. ಇದನ್ನು ದೇಶದ ವಿವಿಧ ರಾಜ್ಯಗಳು ಪಾವಗಡ ಸೋಲಾರ್ ಪಾರ್ಕ್ ಮಾದರಿಯನ್ನು ಅನುಸರಿಸಲು ಆಸಕ್ತಿ ತೋರಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ರಾಜ್ಯದಲ್ಲಿ ಜನಪರ ಆಡಳಿತ ನೀಡುವ ಸರ್ಕಾರವಿದೆ. ಉದ್ಯಮಕ್ಕೆ ನಮ್ಮ ಸರ್ಕಾರದ ಪ್ರೋತ್ಸಾಹವಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ನಮ್ಮ ಸರ್ಕಾರ ಬದ್ಧವಿದೆ ಎಂದು ಅವರು ತಿಳಿಸಿದರು.