i
ರಾಜ್ಯ ಸಮ್ಮೇಳನದ ಪೂರ್ವಭಾವಿ ಸಿದ್ದತೆಗೆ ಉದ್ಘಾಟನೆ ಮೂಲಕ ಅಧಿಕೃತ ಚಾಲನೆ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ರಾಜ್ಯ ಸಮ್ಮೇಳನದ ಪೂರ್ವಭಾವಿ ಸಿದ್ದತೆಗೆ ಉದ್ಘಾಟನೆ ಮೂಲಕ ಅಧಿಕೃತ ಚಾಲನೆ.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 38ನೇ ಸಮ್ಮೇಳನ ಈ ಬಾರಿ ನಮ್ಮ ದಾವಣಗೆರೆ ಜಿಲ್ಲೆಗೆ ಸುಮಾರು 30 ವರ್ಷಗಳ ನಂತರ ಸಿಕ್ಕಿರುವುದು ನಮ್ಮೆಲ್ಲರ ಅದೃಷ್ಟವೆಂದರೆ ತಪ್ಪಾಗಲಾರದು. ಈ ವರ್ಷದ ಅಂತ್ಯದೊಳಗೆ ನಾವು ಸಮ್ಮೇಳನವನ್ನು ಅದ್ದೂರಿಯಾಗಿ ಹಾಗೂ ಬಹಳ ಯಶಸ್ವಿಯಾಗಿ ನೆರವೇರಿಸಬೇಕಿದೆ. ರಾಜ್ಯ ಸಮ್ಮೇಳನದ ಪೂರ್ವಭಾವಿ ಸಿದ್ಧತೆಗೆ ದಿನಾಂಕ : 27.8.2023 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆ ನಗರದ ಹೋಟೆಲ್ ಅಪೂರ್ವ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತ ಚಾಲನೆ ನೀಡಲಾಗುವುದು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪೂರ್ವಭಾವಿ ಸಿದ್ಧತೆಯ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಕೆ.ಒಡೆಯರ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಣ್ಣ ಅವರುಗಳು ಉಪಸ್ಥಿತರಿರುತ್ತಾರೆ. ಈ ಕಾರ್ಯಕ್ರಮಕ್ಕೆ ಕಾರ್ಯಕಾರಿ ಸಮಿತಿ ಸದಸ್ಯರುಗಳು, ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಸರ್ವ ಸದಸ್ಯರು ಸರಿಯಾದ ಸಮಯಕ್ಕೆ ಆಗಮಿಸಿ ಯಶಸ್ವಿಗೊಳಿಸಲು ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್ ಮನವಿ ಮಾಡಿದ್ದಾರೆ.