i
ಲೋಕಸಭಾ ಚುನಾವಣೆ ಗೆಲ್ಲಲು ಈಗಿನಿಂದಲೇ ತಯಾರಿ ನಡೆಸಿ-ಡಿಕೆಶಿ…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಶನಿವಾರ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿ ಅವರು, ಮುಂಬರುವ ಲೋಕಸಭಾ ಚುನಾವಣೆಯ ತಯಾರಿ ಹಾಗೂ ಪಕ್ಷ ಸಂಘಟನೆ ಕುರಿತು ಮುಖಂಡರೊಂದಿಗೆ ಚರ್ಚಿಸಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಿಗೆ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತದೆ. 25ಕ್ಕೂ ಹೆಚ್ಚಿನ ಸೀಟುಗಳನ್ನು ಗೆದ್ದು ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಸರ್ಕಾರ ರಚನೆ ಮಾಡಲು ಕಾರ್ಯಕರ್ತರು ಹಗಲಿರುಳು ದುಡಿಯಬೇಕು ಎಂದು ಅವರು ಹೇಳಿದರು.
ಚಾಮರಾಜನಗರಕ್ಕೆ ಭೇಟಿ ನೀಡಿದ ವೇಳೆ ಅಲ್ಲಿನ ಕಾರ್ಯಕರ್ತರು, ಹಿತೈಷಿಗಳು ಅಭಿಮಾನ ಪೂರ್ವಕವಾಗಿ ಸ್ವಾಗತ ಕೋರಿದರು. ಇದೇ ವೇಳೆ ಪೊಲೀಸ್ ವಂದನೆ ಉಪಮುಖ್ಯಮಂತ್ರಿಗಳು ಸ್ವೀಕರಿಸಿದರು.