i
ಜೆಡಿಎಸ್ ನಾಯಕ ಕುಮಾರಸ್ವಾಮಿ ಲಘು ಸ್ಟ್ರೋಕ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರಿಗೆ ಬುಧವಾರ ತಡರಾತ್ರಿ ಸಣ್ಣ ಪ್ರಮಾಣದಲ್ಲಿ ಸ್ಟ್ರೋಕ್ ಆಗಿದ್ದು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ಕೊಡಿಸಿರುವುದರಿಂದ ಯಾವುದೇ ರೀತಿಯ ದೊಡ್ಡ ಮಟ್ಟದ ಆರೋಗ್ಯ ಹಾನಿ ಆಗಿಲ್ಲ ಎನ್ನಲಾಗಿದೆ.
ಈಗ ಯಾವುದೆ ತೊಂದರೆ ಇಲ್ಲಾ, ಅಗತ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆಸ್ಪತ್ರೆಗೆ ಆಗಮಿಸಿದಾಗ ಕುಮಾರಸ್ವಾಮಿ ಅವರು ಮಾತನಾಡುವ ಸಂದರ್ಭದಲ್ಲಿ ಸ್ವಲ್ಪ ಪ್ರಮಾಣದಲ್ಲಿ ತೊದಲಿಸುತ್ತಿದ್ದರು. ಅವರನ್ನು ತುರ್ತು ನಿಗಾ ಘಟಕ (ಐಸಿಯು)ದಲ್ಲೇ ಚಿಕಿತ್ಸೆ ನೀಡಲಾಗಿದೆ. ಸಾಮಾನ್ಯ ವಾರ್ಡ್ ಗೆ ನಾಳೆ ವರ್ಗಾಯಿಸಲಾಗುವುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಕುಮಾರಸ್ವಾಮಿ ಅವರಿಗೆ ಸಣ್ಣ ಪ್ರಮಾಣದ ಸ್ಟ್ರೋಕ್ ಆಗಿರುವುದು ನಿಜ. ಈಗ ಯಾವುದೆ ತೊಂದರೆ ಇಲ್ಲ. ಆಸ್ಪತ್ರೆಗೆ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಚಿಕಿತ್ಸೆಗೆ ಹೆಚ್ ಡಿ ಕೆ ಸ್ಪಂದಿಸಿದ್ದಾರೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯ ಡಾ.ಸತೀಶ್ ಚಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.