i
ಸೂರ್ಯನತ್ತ ರಾಕೆಟ್ ಉಡಾವಣೆ ಬಾಹ್ಯಾಕಾಶದಲ್ಲೂ ವಿಶ್ವನಾಯಕನಾಗುವತ್ತ ಭಾರತ:ಬೊಮ್ಮಾಯಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೂರ್ಯನ ಕುರಿತು ಅಧ್ಯಯನ ನಡೆಸಲು ಇಸ್ರೋ ವಿಜ್ಞಾನಿಗಳು ಯಶಸ್ವಿ ಉಪಗೃಹ ಉಡಾವಣೆ ಮಾಡಿರುವುದಕ್ಕೆ ಇಸ್ರೋ ವಿಜ್ಞಾನಿಗಳಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಚಂದ್ರಯಾನ 3 ಯಶಸ್ಸಿನ ನಂತರ ಇಸ್ರೊ ವಿಜ್ಞಾನಿಗಳು ಸೂರ್ಯನತ್ತ ಗಮನ ಹರಿಸಿ ಆದಿತ್ಯ ಎಲ್ 1 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಈ ಐತಿಹಾಸಿಕ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.ವಿಶ್ವನಾಯಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ವಿಶ್ವ ನಾಯಕನಾಗುವತ್ತ ಸಾಗುತ್ತಿದ್ದು, ಅದಕ್ಕೆ ಪೂರಕವಾಗಿ ಬಾಹ್ಯಾಕಾಶದಲ್ಲಿಯೂ ಭಾರತ ವಿಶ್ವದ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವ ಮೂಲಕ ವಿಶ್ವವನ್ನು ಭಾರತದೆಡೆಗೆ ನೋಡುವಂತೆ ಮಾಡಿದೆ. ಇಂತಹ ಮಹೋನ್ನತ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಮತ್ತೊಮ್ಮೆ ಹೃದಯಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.