i
ಬಡ ವರ್ಗದ ವಿದ್ಯಾರ್ಥಿಗಳಿಗೆ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ತರಬೇತಿ ಸೂಕ್ತ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ಹುಳಿಯಾರು ರಸ್ತೆಯ ಬಾಪೂಜಿ ವಿದ್ಯಾಸಂಸ್ಥೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ನರ್ಸಿಂಗ್ ಕಾಲೇಜ್ ಮತ್ತು ಬಾಪೂಜಿ ಪ್ಯಾರಾ ಮೆಡಿಕಲ್ ಕಾಲೇಜು ವತಿಯಿಂದ ನಡೆದ ಬಾಪೂಜಿ ಉತ್ಸವ -2023 ರ ಮೊದಲನೇ ದಿನದ ಕಾರ್ಯಕ್ರಮವನ್ನು ಹಿರಿಯೂರು ನಗರದ ನಗರ ಸಭೆ ಪೌರಾಯುಕ್ತ ಹೆಚ್ ಮಹಂತೇಶ್ ಉದ್ಘಾಟನೆ ಮಾಡಿ ಮಾತನಾಡಿದ ಅವರು ವಿದ್ಯಾರ್ಥಿ ಜೀವನ ಅತ್ಯುತ್ತಮವಾದ ಜೀವನ. ಈ ಸಮಯ ಮತ್ತೆ ಮರುಕಳಿಸುವುದಿಲ್ಲ ಆದ್ದರಿಂದ ನೀವು ನಿಮ್ಮ ಭವಿಷ್ಯ ಅತ್ಯುತ್ತಮವಾಗಿ ನಿರ್ಮಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ತಿಳಿಸಿದರು. ಸಂಸ್ಥೆಯ ಸಂಸ್ಥಾಕರು ಹಾಗೂ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ರಾಜ್ಯಾಧ್ಯಕ್ಷ ಜಿ ಎಸ್ ಮಂಜುನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ತರಬೇತಿ ಅತ್ಯುತ್ತವಾದದ್ದು ಇದನ್ನು ನೀವು ಉತ್ತಮವಾಗಿ ಬಳಸಿಕೊಂಡು ನಿಮ್ಮ ವೃತ್ತಿ ಯನ್ನು ನಿಸ್ವಾರ್ಥದಿಂದ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಮುಖ್ಯ ಅತಿಥಿಗಳಾಗಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜೆ ದಿನೇಶ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಚಿತ್ರಲಿಂಗಪ್ಪ, ನಗರ ಸಭೆ ಸದಸ್ಯರಾದ ಎಂ ಡಿ ಸಣ್ಣಪ್ಪ, ಸಂಸ್ಥೆಯ ಕಾರ್ಯದರ್ಶಿ ಜಿ ಎಂ ವರುಣ್ ಕಾರ್ತಿಕ್ ಭಾಗವಹಿಸಿದ್ದರು.ನರ್ಸಿಂಗ್ ವಿದ್ಯಾರ್ಥಿ ಶಿವಾನಿ ಪಿ ಪ್ರಾರ್ಥಿಸಿದರು. ಉಪನ್ಯಾಸಕ ಸೈಯದ್ ಮುಜಾಹಿದ್ ಸ್ವಾಗತಿಸಿದರು. ಉಪನ್ಯಾಸಕಿ ಎ ಆಶಾ ನಿರೂಪಿಸಿದರು.
ಉಪನ್ಯಾಸಕಿ ಶಕೀಬ್, ಸಂಸ್ಥೆಯ ಆಡಳಿತಾಧಿಕಾರಿ ಆರ್.ಮಂಜುನಾಥ್, ವ್ಯವಸ್ಥಾಪಕ ಜಿ ಧನಂಜಯ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ತಿತರಿದ್ದರು.