i
ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸದ ನಾರಾಯಣಸ್ವಾಮಿ…
ಚಂದ್ರವಳ್ಳಿ ನ್ಯೂಸ್, ರಾಮನಗರ:
ಲಘು ಪಾರ್ಶ್ವವಾಯುವಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಅವರ ಖಾಸಗಿ ಕಚೇರಿಯಲ್ಲಿ ಚಿತ್ರದುರ್ಗ ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ರೈತರು, ಬಡವರ ಪರವಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೇಗ ಗುಣಮುಖರಾಗಿ ಸಾರ್ವಜನಿಕ ಸೇವೆಗೆ ಬರಬೇಕು, ಅವರಿಗೆ ದೇವರ ಉತ್ತಮ ಆರೋಗ್ಯ ನೀಡಲಿ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಶುಭ ಆರೈಕೆ ಮಾಡಿದರು.
ಇದೇ ಸಂದರ್ಭದಲ್ಲಿ ಇಬ್ಬರು ನಾಯಕರು ಮುಂಬರುವ ಲೋಕಸಭಾ ಚುನಾವಣೆ ಸ್ಥಿತಿಗತಿಗಳ ಕುರಿತು ಸುಮಾರು ಅರ್ಧ ಗಂಟೆಗೂ ಹೆಚ್ಚಿನ ಕಾಲ ಗೌಪ್ಯವಾಗಿ ಚರ್ಚಿಸಿದರು ಎನ್ನಲಾಗಿದೆ. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಾಧ್ಯವಾದರೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಲಿರುವ ನಾರಾಯಣಸ್ವಾಮಿ ಅವರು ಮತ್ತೊಮ್ಮೆ ಬಿಜೆಪಿ ವಿಜಯ ಪತಾಕೆ ಹಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಲಾಗುತ್ತಿದೆ.
ಭೇಟಿ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮೋಹನ್ ಕುಮಾರ್ ಇದ್ದರು.