i
ಬೆಂಗಳೂರು ಬಂದ್ಬಹುತೇಕ ಯಶಸ್ವಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಬಹುತೇಕ ಯಶಸ್ವಿಯಾಗಿದೆ. ಬೆಂಗಳೂರು ಬಂದ್ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ನಿಲ್ದಾಣದಲ್ಲಿ ಕನ್ನಡ ಧ್ವಜ ಹಿಡಿದು ಪ್ರತಿಭಟನೆ ನಡೆಸಿದ ಹೋರಾಟಗಾರರು ನೀರು ಹರಿಸದಂತೆ ಒತ್ತಾಯಿಸಿದರು. ಕಾವೇರಿಗಾಗಿ ಕರೆ ನೀಡಲಾಗಿದ್ದ ಬೆಂಗಳೂರು ಬಂದ್ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರಮುಖ ವಹಿವಾಟು ಸಂಪೂರ್ಣ ಬಂದ್ಆಗಿ ರಸ್ತೆ ಬಿಕೋ ಎನ್ನುತ್ತಿತ್ತು. ಬಹುತೇಕ ವರ್ತಕರು ಬಂದ್ ಗೆ ಬೆಂಬಲ ಸೂಚಿಸಿದ್ದರು.
ಕಾವೇರಿ ವಿಚಾರವಾಗಿ ಬೆಂಗಳೂರು ಬಂದ್ಹಿನ್ನೆಯಲ್ಲಿ ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದಲೇ ಭಾರೀ ಪೊಲೀಸ್ಭದ್ರತೆ ಹಾಕಲಾಗಿತ್ತು.
ಶಿಕ್ಷಣ ಇಲಾಖೆ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ರಜೆ ಘೋಷಿಸಿತ್ತು. ಹಲವು ಕನ್ನಡಪರ ಸಂಘಟನೆಗಳು ಹೋರಾಟಕ್ಕೆ ದನಿಯಾದವು. ಕನ್ನಡಪರ, ರೈತ ಪರ ಹಾಗೂ ಕಾರ್ಮಿಕ ಸಂಘಟನೆಗಳು ಕಾವೇರಿ ವಿಚಾರದಲ್ಲಿ ನಾವೆಲ್ಲರೂ ಒಂದು ಎನ್ನುವ ಸಂದೇಶ ಸಾರಿದವು.
ಕಾವೇರಿ ಚಳವಳಿಯ ಭಾಗವಾಗಿ ಬೆಂಗಳೂರು ಬಂದ್ವೇಳೆ ಸ್ವಾತಂತ್ರ್ಯಹೋರಾಟಗಾರರ ಉದ್ಯಾನದ ಬಳಿ ಆತ್ಮಹತ್ಯೆಗೆ ಯತ್ನಿಸಿದ ರೈತರೊಬ್ಬರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಕೆಲ ಕಾಲ ಆತಂಕ ಮನೆ ಮಾಡಿತ್ತು. ಬೆಂಗಳೂರಿನಲ್ಲಿ ಕಾವೇರಿ ಹೋರಾಟ ಬೆಂಬಲಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ಉರುಳು ಸೇವೆ ಮಾಡಿ ತಮಿಳು ನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.
ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಕನ್ನಡ ಹೋರಾಟಗಾರರು ಪಾದಯಾತ್ರೆ ಹೊರಟರು. ಕಾವೇರಿ ನೀರು ಹಂಚಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣಗೌಡ ಅವರು ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬಂಧಿಸಲಾಯಿತು. ಹೀಗಾಗಿ ಕರವೇ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಬೆಂಗಳೂರಿನ ಪೀಣ್ಯದಲ್ಲಿ ಅಹಿಂದ ಹಕ್ಕುಗಳ ಹೋರಾಟ ವೇದಿಕೆಯಿಂದ ಡಾ.ಬಿ.ಆರ್.ಅಂಬೇಡ್ಕರ್ಅವರ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಕೂಡಲೇ ನೀರು ಸ್ಥಗಿತಗೊಳಿಸಬೇಕು, ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ತಾಕೀತು ಮಾಡಲಾಯಿತು.
ಬೆಂಗಳೂರಿನಲ್ಲಿ ಸಮೃದ್ಧ ಕರ್ನಾಟಕ ಕನ್ನಡ ಹೋರಾಟ ಸಮಿತಿಯವರು ಶಾಸಕ ಸತೀಶ್ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬೆಂಗಳೂರು ಬಂದ್ಗೆ ಬೆಂಬಲ ಸೂಚಿಸಿದರು.
ಬೆಂಗಳೂರು ಬಂದ್ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಭದ್ರತೆಗಾಗಿ ಸಿವಿಲ್ಪೊಲೀಸರ ಜತೆಗೆ ವಿಶೇಷ ಪಡೆಯ ಪೊಲೀಸರನ್ನೂ ನಿಯೋಜಿಸಿತ್ತು.