i
ಶಾಸಕ ರಘುಮೂರ್ತಿ ಅಧ್ಯಕ್ಷತೆಯಲ್ಲಿ ಸೆ.30ರಂದು ಜನ ಸಂಪರ್ಕ ಸಭೆ….
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ತುರುವನೂರು ಹೋಬಳಿಯ ಬೆಳಗಟ್ಟ, ಕೂನಬೇವು ಹಾಗೂ ಮಾಡನಾಯಕನಹಳ್ಳಿ ಗ್ರಾಮ ಪಂಚಾಯತಿಗಳಲ್ಲಿ ಇದೇ ಸೆಪ್ಟೆಂಬರ್ 30ರಂದು ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ.
ಸೆಪ್ಟೆಂಬರ್ 30ರಂದು ಬೆಳಿಗ್ಗೆ 10ಕ್ಕೆ ಬೆಳಗಟ್ಟ, ಮಧಾಹ್ನ 1ಕ್ಕೆ ಕೂನಬೇವು ಹಾಗೂ ಸಂಜೆ 4ಕ್ಕೆ ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.