i
ಕರ್ನಾಟಕ ಬಂದ್ ಗೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಬೆಂಬಲ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ನೀಡಿರುವ ‘ಕರ್ನಾಟಕ ಬಂದ್‘ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ನೀರು ಉಳಿಸುವ ಹೋರಾಟಕ್ಕೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಸಹಮತ ವ್ಯಕ್ತಪಡಿಸಿದ್ದು ಹೋರಾಟಕ್ಕೆ ಬೆಂಬಲಿಸಿದೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಸ್.ಟಿ.ನವೀನ್ ಕುಮಾರ್ ತಿಳಿಸಿದ್ದಾರೆ.ಚಿತ್ರದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕಾವೇರಿ ನದಿ ನೀರು ಸಮಸ್ಯೆ ಉಲ್ಪಣವಾಗಿರುವ ಹಿನ್ನೆಲೆಯಲ್ಲಿ ಸೆ. 29ರಂದು ಕರ್ನಾಟಕ ಬಂದ್ ಆಚರಿಸಲು ವಿವಿಧ ಕನ್ನಡಪರ ಸಂಘಟನೆಗಳು ನಿರ್ಧರಿಸಿವೆ. ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳು , ಕನ್ನಡದ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಸಭೆ ಸೇರಿದ್ದವು. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕೆಲ ಸಂಘಟನೆಗಳು ಸೆ.29ರಂದು ಎಲ್ಲಾ ಸಂಘಟನೆಗಳು ಒಟ್ಟಾಗಿ ‘ಕರ್ನಾಟಕ ಬಂದ್‘ ಮಾಡೋಣ ಎಂದಿದ್ದು. ಸರಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿಎಲ್ಲಾ ಸಂಘಟನೆಗಳು ಒಟ್ಟಾಗಿ ‘ಕರ್ನಾಟಕ ಬಂದ್‘ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ನಿರ್ಧರಿಸಿದ್ದು ಇದಕ್ಕೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಸಾಥ್ ನೀಡಿದೆ ಎಂದು ರಾಜ್ಯಾಧ್ಯಕ್ಷರಾದ ಎಸ್.ಟಿ.ನವೀನ್ ಕುಮಾರ್ ತಿಳಿಸಿದ್ದಾರೆ.
ನೂರಕ್ಕೂ ಕ್ಕೂ ಹೆಚ್ಚು ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಹೋರಾಟಕ್ಕೆ ಸಹಮತ ವ್ಯಕ್ತಪಡಿಸಿರುವ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆಯು ಜಲಸಂರಕ್ಷಣೆ ನಮ್ಮ ಮೊದಲ ಆದ್ಯತೆ ರೈತರ ಪರವಾಗಿ ನಾವು ಸದಾ ಜೊತೆಯಲ್ಲಿ ಇರುತ್ತೇವೆ ಎಂದು ರಾಜ್ಯ ಘಟಕದ ಅಧ್ಯಕ್ಷರಾದ ನವೀನ್ ಕುಮಾರ್, ಉಪಾಧ್ಯಕ್ಷರಾದ ಅಂಬಿಕಾ, ಪ್ರಧಾನ ಕಾರ್ಯದರ್ಶಿ ಮಾಲತೇಶ್ ಅರಸ್, ಕೋಶಾಧ್ಯಕ್ಷರಾದ ಟಿ ರುದ್ರಮುನಿ, ಕಾನೂನು ಸಲಹೆಗಾರರಾದ ಡಾ.ಎಂ.ಸಿನರಹರಿ ಅವರ ನೇತೃತ್ವದಲ್ಲಿ ಪ್ರವಾಸಿ ಮಂದಿರದಲ್ಲಿ ಸಭೆ ನಡೆದು ಕರ್ನಾಟಕ ಬಂದ್ ಗೆ ಬೆಂಬಲಿಸಿದ್ದಾರೆ. ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆಯ ಬೆಂಗಳೂರು, ಮೈಸೂರು, ರಾಮನಗರ, ಮಂಡ್ಯ ಜಿಲ್ಲಾ ಘಟಕಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ ಕಾವೇರಿ ನೀರು ಕುರಿತ ಪ್ರತಿಭಟನೆಯ ಸಂದರ್ಭದಲ್ಲಿ, ಕೆಆರ್ ಎಸ್ ಡ್ಯಾಂನಲ್ಲಿ ಕಾವೇರಿ ನೀರು ಇಳಿಕೆಯಾದರೆ ಅದು ಬೆಂಗಳೂರಿಗರ ಕುಡಿಯುವ ನೀರಿನ ಸೌಲಭ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಬಿಡುತ್ತಿರುವುದರಿಂದ ಅದು ಬೆಂಗಳೂರಿಗರೂ ತೊಂದರೆ ಉಂಟು ಮಾಡುವುದರಿಂದ ಬೆಂಗಳೂರಿನಲ್ಲೂ ಬಂದ್ ಯಶಸ್ವಿಯಾಗಿದೆ. ಇದೀಗ ಹೋರಾಟ ರಾಜ್ಯ ಬಂದ್ ಗೆ ಬೆಂಬಲ ಸೂಚಿಸಿದರು.