i
ಇಂದು ಕರ್ನಾಟಕ ಬಂದ್, 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿದ ಸರ್ಕಾರ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಬಂದ್ಗೆ ಪಡಿತರ ವಿತರಕರ ಸಂಘ, ಹಲವು ರೈತ ಸಂಘಟನೆಗಳು, ಬಿಜೆಪಿ, ಜೆಡಿಎಸ್, ಸರ್ವೋದಯ ಪಕ್ಷ, ಪರಿಸರ ಸಂಘಟನೆಗಳು, ಕರವೇ ಸೇರಿದಂತೆ ಹಲವು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ನೀಡಿದ್ದು ಇಂದು ಬಹುತೇಕ ಸಾರಿಗೆ ಬಸ್ ಗಳ ಸಂಚಾರ ಸ್ಥಗಿತವಾಗಿದೆ.
ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿತ್ತಿರುವ ಕ್ರಮವನ್ನು ವಿರೋಧಿಸಿ ಸೆ. 29 ರಂದು ನಡೆಯುವ ಕರ್ನಾಟಕ ಬಂದ್ಗೆ ಬೆಂಬಲ ನೀಡಲಾಗುವುದು ರಂದು ಬೆಂಗಳೂರು ನಗರ ಸರ್ಕಾರಿ ಪಡಿತರ ವಿತರಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಜೆ.ಬಿ. ಕುಮಾರ್ ತಿಳಿಸಿದ್ದಾರೆ.
ರಾಜ್ಯದ ನೆಲ, ಜಲ, ಭಾಷೆಗೆ ಧಕ್ಕೆ ಬಂದಾಗ ರಾಜ್ಯದ 22000 ಕ್ಕೂ ಹೆಚ್ಚು ಪಡಿತರ ವಿತರಕರು ಸಂಪೂರ್ಣ ಬೆಂಬಲ ನೀಡಿದ್ದೇವೆ.
ಕರ್ನಾಟಕ ಬಂದ್ಗೆ ರಾಜ್ಯದ ನಮ್ಮ ಎಲ್ಲಾ ವಿತರಕರ ಜೊತೆಗೆ ಬೆಂಗಳೂರು ನಗರದ ಅನೌಪಚಾರಿಕ ಪ್ರದೇಶದ 750 ನ್ಯಾಯಬೆಲೆ ಅಂಗಡಿಗಳು ಮತ್ತು ಬೆಂಗಳೂರು ನಗರದ ಐದು ತಾಲ್ಲೂಕುಗಳು 750 ಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳು ಒಟ್ಟು 1500 ನ್ಯಾಯಬೆಲೆ ಅಂಗಡಿಗಳ ಮಾಲೀಕರು, ಪಡಿತರ ವಿತರಕರ ಹಿತರಕ್ಷಣಾ ಸಂಘ ಪದಾಧಿಕಾರಿಗಳು ತಮ್ಮ ಅಂಗಳನ್ನು ಬಂದ್ ಮಾಡಿ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಾದ್ಯಂತ ಸೆ. 29 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಕಲಂ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಸಾರ್ವಜನಿಕರ ದೈನಂದಿನ ಜೀವನಕ್ಕೆ ತೊಂದರೆಯಾಗದಂತೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ.
ಮಾರುಕಟ್ಟೆಗಳು, ಅಂಗಡಿಗಳು, ಶೋರೂಮ್ಗಳನ್ನು ಬಲವಂತವಾಗಿ ಮುಚ್ಚುವುದನ್ನು ಅನುಮತಿಸಲಾಗುವುದಿಲ್ಲ. ಶಾಲೆಗಳು, ಕಾಲೇಜುಗಳು ಅಥವಾ ಕಚೇರಿಗಳನ್ನು ಬಲವಂತವಾಗಿ ಮುಚ್ಚುವುದನ್ನು ಅನುಮತಿಸಲಾಗುವುದಿಲ್ಲ.. ಸಾರ್ವಜನಿಕ ಸಾರಿಗೆ ಮತ್ತು ವಾಹನಗಳ (ಸರ್ಕಾರಿ ಅಥವಾ ಖಾಸಗಿ) ಸಂಚಾರಕ್ಕೆ ಯಾವುದೇ ಅಡ್ಡಿಯನ್ನು ಅನುಮತಿಸಲಾಗುವುದಿಲ್ಲ. ಗೌರವಾನ್ವಿತ ಸುಪ್ರೀಂ ಕೋರ್ಟ್/ಹೈಕೋರ್ಟ್ ನಿರ್ದೇಶನಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಪ್ರಾರಂಭಿಸಲಾಗುವುದು. ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಇತರ ಸಾರ್ವಜನಿಕ ಆಸ್ತಿಗಳ ರಕ್ಷಣೆಗೆ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಅಧಿಕಾರಿಗಳು ಮೊಬೈಲ್ ಗಸ್ತು ತಿರುಗುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.