i
ಸೆ.29 ಹಾಗೂ 30 ರಂದು ವಿದ್ಯುತ್ ವ್ಯತ್ಯಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಗ್ರಾಮೀಣ ಉಪವಿಭಾಗದ ಭರಮಸಾಗರ ಶಾಖಾ ವ್ಯಾಪ್ತಿಯಲ್ಲಿನ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 20 ಎಂ.ವಿ.ಏ ಪರಿವರ್ತಕಗಳ ಅಳವಡಿಕೆ ಕಾರ್ಯ ನಡೆಯುವುದರಿಂದ ಸೆ.29 ಹಾಗೂ 30 ರಂದು ವಿದ್ಯುತ್ ಸರಬರಾಜಿನಲ್ಲಿ ವತ್ಯಯ ಉಂಟಾಗಲಿದೆ. ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಹೆಗ್ಗರೆ, ಎಮ್ಮಿಹಟ್ಟಿ,ನಲ್ಲಿಕಟ್ಟೆ, ಹೆಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದ್ದೂರ್ ಘಟ್ಟ, ಪಾಮರಹಳ್ಳಿ, ಕೋಡಿಹಳ್ಳಿ, ಹರಳಿಕಟ್ಟೆ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.