i
ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಶ್ರೇಷ್ಠ ತೋಟಗಾರಿಕೆ ರೈತ/ರೈತ ಮಹಿಳಾ ಪ್ರಶಸ್ತಿ ನೀಡಲು ಉದ್ದೇಶಿಸಿದ್ದು,ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತೋಟಗಾರಿಕೆ ವಿವಿಯು 2023ರ ಡಿಸೆಂಬರ್ 23-25 ರವರೆಗೆ ಜೀವವೈವಿಧ್ಯತೆಗಾಗಿ ತೋಟಗಾರಿಕೆ ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು ವಿವಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ತೋಟಗಾರಿಕೆ ಮೇಳದಲ್ಲಿ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕೃಷಿಕರಿಗೆ, ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಲ್ಲಿ ಪ್ರತಿಯೊಂದು ಜಿಲ್ಲೆಗೆ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಅರ್ಜಿ ನಮೂನೆಯನ್ನು ತೋಟಗಾರಿಕಾ ಮಹಾವಿದ್ಯಾಲಯ, ತೋವಿವಿ ಆವರಣ, ಜಿಕೆವಿಕೆ, ಬೆಂಗಳೂರು ಅಥವಾ ಹತ್ತಿರದ ತೋಟಗಾರಿಕಾ ಇಲಾಖೆಯ ಕಛೇರಿಯಿಂದ ಅಥವಾ ತೋ.ವಿ.ವಿಯ ವೆಬ್ಸೈಟ್ www.uhsbagalkot.karnataka.gov.in ಮೂಲಕ (ಅರ್ಜಿ ನಮೂನೆ; ಅನುಬಂಧ–1) ಕೂಡ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 06 ನೇ ನವೆಂಬರ್ 2023 ರೊಳಗಾಗಿ ಡೀನ್, ತೋಟಗಾರಿಕಾ ಮಹಾವಿದ್ಯಾಲಯ, ತೋವಿವಿ ಆವರಣ, ಜಿಕೆವಿಕೆ, ಬೆಂಗಳೂರು –560065 ಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂ¥ರ್ಕಿಸಿ 6364064901, 9448344103, 9972159613, 8867574561 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.