i
ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯು ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ವಿವಿಧ ಜಿಲ್ಲೆಗಳಲ್ಲಿ ವಿವಿಧ ಕ್ರೀಡೆಗಳನ್ನು ಏರ್ಪಡಿಸಲಾಗಿದೆ.
ಕ್ರೀಡೆಗಳು ಹಾಗೂ ಜಿಲ್ಲೆಗಳ ವಿವರ: ಅಕ್ಟೋಬರ್ 3 ರಂದು ಬೆಳಿಗ್ಗೆ 9 ಗಂಟೆಯೊಳಗಾಗಿ ಹೊಸದುರ್ಗ ತಾಲ್ಲೂಕಿನ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣದಲ್ಲಿ ಈಜು ಸ್ಪರ್ಧೆಗೆ ನಡೆಯಲಿದೆ, ಅ. 4 ರಂದು ಬೆಳಿಗ್ಗೆ 9 ಗಂಟೆಯೊಳಗಾಗಿ ಚಿತ್ರದುರ್ಗದ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್ ಕ್ರೀಡೆಗಳು ನಡೆಯಲಿದೆ. ಅ. 4ರಂದು ಬೆಳಿಗ್ಗೆ 8 ಗಂಟೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಸೂಲಿಬೆಲೆ ಮುಖ್ಯರಸ್ತೆ, ಸಿವಿಲ್ ಕೋರ್ಟ್ ಮುಂಭಾಗದ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಹ್ಯಾಂಡ್ಬಾಲ್ ಮತ್ತು ನೆಟ್ಬಾಲ್ ಕ್ರೀಡೆಗಳು ನಡೆಯಲಿದೆ. ಅ.5 ಮತ್ತು 6 ರಂದು ಬೆಳಿಗ್ಗೆ 8 ಗಂಟೆಯಿಂದ ತುಮಕೂರು ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಟೆಕ್ವಾಂಡೋ, ಜಿಮ್ನಾಸ್ಟಿಮ್, ವುಷು, ಕಬಡ್ಡಿ ಕ್ರೀಡೆಗಳು ನಡೆಯಲಿವೆ. ಅ. 5 ಮತ್ತು 6 ರಂದು ಬೆಳಿಗ್ಗೆ 8 ಗಂಟೆಯೊಳಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಕ್ಕಿತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ ಹಾಕಿ ಕ್ರೀಡೆ ನಡೆಯಲಿದೆ. ಅ. 6 ರಂದು ಬೆಳಿಗ್ಗೆ 9 ಗಂಟೆಯಿಂದ ದಾವಣಗೆರೆ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಖೋಖೋ, ಬ್ಯಾಸ್ಕೇಟ್ ಬಾಲ್ ಮತ್ತು ಕುಸ್ತಿ ಕ್ರೀಡೆಗಳು ನಡೆಯಲಿವೆ. ಅ.6 ಮತ್ತು 7 ರಂದು ಬೆಳಿಗ್ಗೆ 9 ಗಂಟೆಯಿಂದ ಶಿವಮೊಗ್ಗ ಜಿಲ್ಲೆಯ ನೆಹರೂ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ, ವಾಲಿಬಾಲ್, ಬ್ಯಾಡ್ಮಿಂಟನ್ ಮತ್ತು ಟೆನ್ನಿಸ್ ಕ್ರೀಡೆಗಳು ನಡೆಯಲಿವೆ.
ಸೆಪ್ಟೆಂಬರ್ 23 ಮತ್ತು 24 ರಂದು ಚಿತ್ರದುರ್ಗ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಮತ್ತು ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ಷುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
ಚಿತ್ರದುರ್ಗ ಜಿಲ್ಲೆಯಿಂದ ಭಾಗವಹಿಸುವ ಸ್ಪರ್ಧಾಳುಗಳು ಆಯಾ ಜಿಲ್ಲೆಗಳಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಗಧಿಪಡಿಸಿದ ದಿನಾಂಕದಂದು ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ ಹಾಗೂ ಕಡ್ಡಾಯವಾಗಿ ಗುರುತಿನ ಪತ್ರವನ್ನು ಪಡೆದು ಸಹಾಯಕ ನಿರ್ದೇಶಕರ ಸಹಿ ಮಾಡಿಸಿಕೊಂಡು ತೆಗೆದುಕೊಂದು ಹೋಗಬೇಕು. ಸ್ಪರ್ಧಾಳುಗಳ ಪ್ರಯಾಣ ಭತ್ಯೆ ಮತ್ತು ದಿನಭತ್ಯೆಯನ್ನು ಜಿಲ್ಲಾ ತಂಡದ ವ್ಯವಸ್ಥಾಪಕರು ಆಯಾ ಜಿಲ್ಲೆಗಳಲ್ಲಿ ವರದಿ ಮಾಡಿಕೊಂಡ ನಂತರ ವಿತರಿಸಲಾಗುವುದು.
ಸೂಚನೆಗಳು: ಈ ಕ್ರೀಡಾಕೂಟಗಳಲ್ಲಿ ಭಾಗವಹಿಸುವವರು 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ತೆಗೆದುಕೊಂಡು ಹೋಗಬೇಕು. ಕ್ರೀಡಾಪಟುಗಳು ಗುರುತಿನ ಪತ್ರ ಹಾಗೂ ವರ್ಜಿನಲ್ ಆಧಾರ್ಕಾರ್ಡ್ನ್ನು, ಲಘು ಹಾಸಿಗೆ ಮತ್ತು ಹೊದಿಕೆಯನ್ನು ತೆಗೆದುಕೊಂಡು ಹೋಗಬೇಕು. ಕ್ರೀಡಾಪಟುಗಳು ಆಯಾ ಜಿಲ್ಲೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದ ಪಥಸಂಚಲನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಕ್ರೀಡಾಪಟುಗಳು ಶಿಸ್ತು ಹಾಗೂ ಸಂಯಮದಿಂದ ವರ್ತಿಸುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಾಗೃತಿ ವಹಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.