i
ಪ್ರವಾಸಿ ಮಾರ್ಗದರ್ಶಿಗಳಿಗೆ ಪುನಶ್ವೇತನ ತರಬೇತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರವಾಸೋದ್ಯಮ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರವಾಸಿ ಮಾರ್ಗದರ್ಶಿಗಳಿಗೆ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 3 ರಿಂದ 9ರವರೆಗೆ ಚಿತ್ರದುರ್ಗ ನಗರದ ಹೋಟೆಲ್ ಮಯೂರ ದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಕ್ಟೋಬರ್ 3ರಂದು ಬೆಳಿಗ್ಗೆ 10.30ಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ತರಬೇತಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಭಾಗವಹಿಸುವರು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.