i
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ, ಭಯೋತ್ಪಾದಕರಿಗೆ ಹಾಗೂ ಜಿಹಾದಿ ರಕ್ಕಸರಿಗೆ ಸ್ವರ್ಗ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ, ಬಂದಿದ್ದು, ಭಯೋತ್ಪಾದಕರಿಗೆ ಹಾಗೂ ಜಿಹಾದಿ ರಕ್ಕಸರಿಗೆ ಕರ್ನಾಟಕ ಸ್ವರ್ಗವಾಗಿ ಮಾರ್ಪಟ್ಟಿದೆ ಎಂದು ರಾಜ್ಯ ಬಿಜೆಪಿ ಗಂಭೀರ ಆರೋಪ ಮಾಡಿದೆ.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಪ್ರಕರಣಗಳನ್ನು ಉಲ್ಲೇಖಿಸಿ ಬಿಜೆಪಿ ಎಕ್ಸ್ ನಲ್ಲಿ ಟ್ವೀಟ್ ಮಾಡಿ, ಉಡುಪಿಯಲ್ಲಿ ಹಿಂದೂ ಯುವತಿಯರ ಖಾಸಗಿ ವಿಡಿಯೋಗಳ ರಹಸ್ಯ ಚಿತ್ರೀಕರಣ. ರಾಮನಗರದಲ್ಲಿ ಹಾಡುಹಗಲೇ ಗೋವುಗಳ ಕಳ್ಳತನ ಹಾಗೂ ವಧೆ. ರಾಮನಗರದ ಟಿಪ್ಪು ನಗರಕ್ಕೆ ಕರೆಂಟ್ಬಿಲ್ ಕೊಡಲು ಹೋದ ಬೆಸ್ಕಾಂ ಸಿಬ್ಬಂದಿಗಳ ಮೇಲೆ ಗುಂಪು ಹಲ್ಲೆ. ಭದ್ರಾವತಿಯಲ್ಲಿ ಹಿಂದೂ ಯುವಕನ ಮೇಲೆ, ಜಿಹಾದಿ ಸಂಘಟನೆಗಳಿಂದ ಮಾರಣಾಂತಿಕ ಹಲ್ಲೆ.ಹಾಸನದಲ್ಲಿ ಹಾಡುಹಗಲೇ ಗನ್ಹಿಡಿದು, ಜಿಹಾದಿ ಯುವಕರಿಂದ ಪುಂಡಾಟ.ಚಿಕ್ಕಬಳ್ಳಾಪುರದಲ್ಲಿ ಹಿಂದೂ ಯುವಕನ ಮೇಲೆ ಜಿಹಾದಿಗಳ ನೈತಿಕ ಪೊಲೀಸ್ಗಿರಿ. ಶಿವಮೊಗ್ಗದಲ್ಲಿ ಹಿಂದೂಗಳ ಮನೆ, ವಾಹನಗಳ ಮೇಲೆ ಕಲ್ಲೆಸೆತ – ತಲ್ವಾರ್ನಿಂದ ಕೊಲೆ ಯತ್ನ. ತಾವೆಂತಹ ದೇಶದ್ರೋಹದ ಕೆಲಸವನ್ನು ಮಾಡಿದರೂ, ಕಾಂಗ್ರೆಸ್ ಪಕ್ಷ ನಮ್ಮ ಬೆಂಬಲಕ್ಕಿರಲಿದೆ ಎಂಬ ಕಾರಣಕ್ಕೆ ಜಿಹಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಕರ್ನಾಟಕವನ್ನು ಮತ್ತೊಂದು ತಾಲಿಬಾನ್ಮಾಡಲು ಕಾಂಗ್ರೆಸ್“ಸಿದ್ದ”ವಾಗಿ ನಿಂತಂತೆ ಕಾಣುತ್ತಿದೆ!! ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.