i
ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್ ತಾಯಿ ಮಾಳಿಗೆ ಇಂದ್ರಮ್ಮ ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾಮಧೇನು ಬಸ್ ಮಾಲೀಕರು ಹಾಗೂ ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್ ಅವರ ತಾಯಿ ಮಾಳಿಗೆ ಇಂದ್ರಮ್ಮ(82) ಸೋಮವಾರ ನಿಧನರಾಗಿದ್ದಾರೆ.
ಮೃತರು ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್ ಸೇರಿದಂತೆ ಮೂರು ಮಂದಿ ಪುತ್ರರು, ಇಬ್ಬರು ಪುತ್ರಿಯರು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆ ಟಿ.ನೂಲೇನೂರಿನ ಅವರ ತೋಟದಲ್ಲಿ ಸೋಮವಾರ ಮಧ್ಯಾಹ್ನ ಜರುಗಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸಂತಾಪ- ಶೇಖರ್ ಅವರ ತಾಯಿ ಇಂದ್ರಮ್ಮನವರ ನಿಧನಕ್ಕೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಪಿಲಾಜನಹಳ್ಳಿ ಎಂ.ಜಯಣ್ಣ, ರಾಜ್ಯ ಕಾರ್ಯದರ್ಶಿ ಬಿ.ಕಾಂತರಾಜ್, ಜೆಡಿಎಸ್ ಮುಖಂಡರಾದ ಡಿ.ಗೋಪಾಲಸ್ವಾಮಿ ನಾಯಕ, ಹೆಚ್.ನಾಗರಾಜ್, ವೀರಣ್ಣ, ಮಂಜುನಾಥ್ ಸೇರಿದಂತೆ ಮತ್ತಿತರರು ಅಂತ್ಯ ಕ್ರಿಯೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂತಾಪ ಸೂಚಿಸಿದ್ದಾರೆ.