i
ಉಪನ್ಯಾಸಕರ ವರ್ಗಾವಣೆ ವಿರೋಧಿಸಿ ಸರ್ಕಾರಿ Bsc ನರ್ಸಿಂಗ್ ವಿದ್ಯಾರ್ಥಿಗಳಿಂದ ಧರಣಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಸರ್ಕಾರಿ ನರ್ಸಿಂಗ್ ಕಾಲೇಜ್ ಉಪನ್ಯಾಸಕರನ್ನು ಬೇರೆ ಕಡೆ ನಿಯೋಜನೆ ಮಾಡಿರುವುದನ್ನು ವಿರೋಧಿಸಿ ನರ್ಸಿಂಗ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಸರ್ಜನ್ ಕಚೇರಿ ಮುಂಭಾಗ ಧರಣಿ ಮಾಡಿ ನಿಯೋಜನೆ ರದ್ದು ಮಾಡುವಂತೆ ಒತ್ತಾಯಿಸಿದರು.ಬೇರೆ ಕಡೆ ನಿಯೋಜನೆ ಮಾಡಿರುವುದನ್ನು ಕೂಡಲೇ ರದ್ದು ಮಾಡಬೇಕು. ಯಾವುದೇ ಮಾಹಿತಿ ನೀಡದೆ ಏಕಾಏಕಿ ನಿಯೋಜನೆ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದರು.
ನರ್ಸಿಂಗ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಕಳೆದ ಒಂದು ತಿಂಗಳ ಹಿಂದೆ ಮನವಿ ಮಾಡಲಾಗಿತ್ತು. ಈಗ ಮೂಲ ಸೌಲಭ್ಯ ಕಲ್ಪಿಸುವುದು ಹೋಗಲಿ ಇರುವ ಉಪನ್ಯಾಸಕನ್ನು ಬೇರೆಡೆಗೆ ನಿಯೋಜನೆ ಮಾಡುವ ಮೂಲಕ ವಿದ್ಯಾರ್ಥಿಗಳ ಕೆಂಗಣ್ಣಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರು ಗುರಿಯಾಗಿದ್ದಾರೆ ಎಂದು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತ ಪಡಿಸಿದರು.ಜಿಲ್ಲಾ ಸರ್ಜನ್ ಡಾ.ರವೀಂದ್ರ ಅವರ ಕಚೇರಿ ಮುಂಭಾಗ 180 ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ಧರಣಿ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.