i
ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾ ಯಾತ್ರೆಗೆ ಲಕ್ಷಾಂತರ ಜನ…ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: Lakhs of people for Chitradurga Hindu Mahaganapati Shobha Yatra…
ಕೋಟೆ ನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯ ಶೋಭಾ ಯಾತ್ರೆ ಲಕ್ಷಾಂತರ ಭಕ್ತರು, ಅಭಿಮಾನಿಗಳು, ಹಿಂದೂಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.ನಗರದ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಗಣಪತಿ ವಿಸರ್ಜನಾ ಬೃಹತ್ ಶೋಭಾಯಾತ್ರೆಗೆ ಕೊಲ್ಲಾಪುರದ ಕನ್ನೇರಿಮಠದ ಕಾಡು ಸಿದ್ದೇಶ್ವರ ಶ್ರೀಗಳು ಚಾಲನೆ ನೀಡಿದರು.
ಭಾನುವಾರ ಬೆಳಿಗ್ಗೆಯಿಂದಲೇ ಸಾರೋಪಾದಿಯಲ್ಲಿ ಜನರು ಸೇರತೊಡಗಿದ್ದರು. 12ರ ಸುಮಾರಿಗೆ ವಿಜ್ಞಾನ ಕಾಲೇಜು ಮುಂಭಾಗದಿಂದ ಶುರುವಾದ ಗಣಪತಿ ವಿಸರ್ಜನಾ ಶೋಭಾಯಾತ್ರೆ ಮೂರು ಕಿಲೋಮೀಟರ್ ಸಾಗಿ, ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಈ ಮೆರವಣಿಗೆಗೆ ನಿರೀಕ್ಷೆಗೂ ಮೀರಿ ಜನರು ಬಂದಿದ್ದರು. ಬಿಸಿಲನ್ನು ಲೆಕ್ಕಿಸದೆ ಜನರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ್ದು ಕಂಡು ಬಂದಿತ್ತು. ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನ ಸ್ಥಳದಿಂದ ಮೆರವಣಿಗೆ ಹೊರಟು ಜಿಲ್ಲಾ ಆಸ್ಪತ್ರೆ ಮಾರ್ಗವಾಗಿ ಮದಕರಿನಾಯಕನ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ ಹಾಗೂ ಕನಕ ವೃತ್ತದದ ಮೂಲಕ ಶೋಭಾಯಾತ್ರೆ ಸಾಗಿತು. ಈ ಮೆರವಣಿಗೆಯಲ್ಲಿ ವಾದ್ಯ ಗೋಷ್ಠಿ, ತಮಟೆ, ಡೋಲು, ಗೊಂಬೆ ಕುಣಿತ, ವೀರಗಾಸೆ ಈಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಮೆರುಗು ನೀಡಿದವು. ಲಕ್ಷಾಂತರ ಜನರು ಸಾಗರೋಪಾದಿಯಲ್ಲಿ ಕಿಕ್ಕಿರಿದು ಮೆರವಣಿಗೆಯಲ್ಲಿ ಸೇರಿದ್ದರು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮುಂದೆ ಬರುತ್ತಿದ್ದಂತೆ ಕಟ್ಟಡಗಳ ಮೇಲಿದ್ದ ಜನರ ಸಂಭ್ರಮ ಮುಗಿಲು ಮುಟ್ಟಿತ್ತು. ಎತ್ತ ತಿರುಗಿದರು ಸಹ ಜನವೋ, ಜನ. ಗಣಪತಿ ಮೆರವಣಿಗೆಗೆ ಇಷ್ಟು ಜನರು ಆಗಮಿಸುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಯುವಕ, ಯುವತಿಯರು, ಮಕ್ಕಳು, ಹಿರಿಯರು ಹೀಗೆ ಎಲ್ಲರೂ ಭವ್ಯ ಮೆರವಣಿಗೆಗೆ ಸಾಕ್ಷಿಯಾದರು. ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು.
ಭದ್ರತೆಗಾಗಿ ಕೆಎಸ್ಆರ್ಪಿ ತುಕಡಿಗಳು, ಡಿಎಆರ್ ತುಕಡಿಗಳು ಸೇರಿದಂತೆ ಸಾವಿರಾರು ಪೊಲೀಸರ ನಿಯೋಜನೆ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮೆರವಣಿಗೆಯಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು. ಜೊತೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದ ತಂಡ ಸಹ ಎಲ್ಲಿಯೂ ಸಮಸ್ಯೆ ಆಗದಂತೆ ಎಚ್ಚರವಹಿಸಿದ್ದರು.
ಇನ್ನು ಒಳ ಬರುವ ಪ್ರಮುಖ ರಸ್ತೆಗಳನ್ನು ತಾತ್ಕಾಲಿಕವಾಗಿ ಬಂಬುಗಳಿಂದ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿತ್ತು. ನಗರದ ವಿವಿಧ ಭಾಗಗಳಲ್ಲಿ ವಾಚಿಂಗ್ ಟವರ್ ನಿರ್ಮಾಣ ಮಾಡಿದ್ದರು. ಭಾರತ್ ಮಾತಾಕಿಜೈ ಎಂದು ಹೇಳಿದರೆ, ಭಾರತ ಮಾತೆ ಎದ್ದು ಬರುತ್ತಾಳೆ.ನಾವೆಲ್ಲ ಹಿಂದೂಗಳಾಗಿದ್ದು, ನಾವೆಲ್ಲರೂ ಒಂದೇ ಎಂದು ಯುವಕ ಯುವತಿಯರು ಕೂಗಿ ಕೂಗಿ ಹೇಳುತ್ತಿದ್ದರು. ವಿವೇಕಾನಂದರು ನಾವೆಲ್ಲರೂ ಹಿಂದೂಗಳು ಎಂದು ಹೇಳಿಕೊಳ್ಳಬೇಕು ಎಂದಿದ್ದಾರೆ. ನಾವುಗಳು ಹಿಂದೂ ಎಂದುಹೇಳಿಕೊಳ್ಳಲು ಹೆಮ್ಮೆಯಿದೆ. ನಾವು ಇಡೀ ದೇಶವನ್ನು ಒಂದುಕುಟುಂಬವಾಗಿ ನೋಡುತ್ತೇವೆ. ಇದುನಮ್ಮಿಂದ ಮಾತ್ರ ಸಾಧ್ಯ, ಅನಾದಿಕಾಲದಿಂದ ಕೂಡ ನಮ್ಮ ಪೂರ್ವಜರು ಹಿಂದೂ ಸಂಸ್ಕೃತಿಯನ್ನು ಪೂಜಿಸಿಕೊಂಡು ಬಂದಿದ್ದಾರೆ. ದೇಶವನ್ನು ಒಂದುಕುಟುಂಬವನ್ನಾಗಿ ಮಾಡುವುದು ನಮ್ಮಗುರಿಯಾಗಿದೆ. ಸರ್ವರೂ ಆರೋಗ್ಯದಿಂದ ಸುಖವಾಗಿ ಇರುವಂತೆ ಬಯಸುವವರು ನಾವು, ಇದಕ್ಕಾಗಿ ಇಂದುದೇಶವನ್ನು ರಕ್ಷಿಸುವ ಕೆಲಸವನ್ನು ಮಾಡಬೇಕಿದೆ. ಹಿಂದೂತ್ವವಾದದಿಂದ ಮಾತ್ರ ದೇಶ ರಕ್ಷಿಸಲು ಸಾಧ್ಯ, ಇದರಿಂದ ದೇಶ ರಕ್ಷಿಸುವುದು ನಮ್ಮ ಸಂಕಲ್ಪವಾಗಿದೆ ಎಂದು ಅವರು ಹೇಳಿದರು.ಕೇಸರಿ ಮಾಯವಾದ ದುರ್ಗ: ಗಣೇಶನ ಬೃಹತ್ ಶೋಭಾಯಾತ್ರೆಗೆ ಚಿತ್ರದುರ್ಗ ನಗರ ಕೇಸರಿ ಬಣ್ಣದ ಮಾಯಾವಾಗಿತ್ತು. ಎಲ್ಲಿ ಎತ್ತಾ ನೋಡಿ ಕಣ್ಣಾಡಿಸಿದರೂ ಕೇಸರಿ ಬಾವುಟ ಹಾರಾಟ ಕಾಣುತ್ತಿದ್ದವು. ಇದರ ಜೊತೆಯಲ್ಲಿ ಶಾಸಕ ವೀರೇಂದ್ರ ಪಪ್ಪಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಶಾಸಕ ಚಂದ್ರಪ್ಪ ಸೇರಿದಂತೆ ಮತ್ತಿತರರ ಕಟೌಟ್, ಬ್ಯಾನರ್ ಗಳು ಸಿಕ್ಕ ಸಿಕ್ಕ ಜಾಗ, ವಿದ್ಯುತ್ ಕಂಬ ಮತ್ತಿತರ ಕಡೆ ಕಟ್ಟಲಾಗಿತ್ತು.
ಮದಕರಿ ವೃತ್ತದಲ್ಲಿ ಮದಕರಿ ನಾಯಕ ಪ್ರತಿಮೆ ಮೇಲೊಂದು ಶಿವನ ವಿಗ್ರಹ, ಎದುರಿಗೆ ಬಸವನ ವಿಗ್ರಹ ಸೇರಿದಂತೆ ಕೋಟೆ ಮಾದರಿಯಲ್ಲಿ ವೃತ್ತವನ್ನು ಅಲಂಕರಿಸಲಾಗಿತ್ತು. ಇದರ ಜೊತೆಯಲ್ಲಿ ಕನಕ ವೃತ್ತದಲ್ಲೂ ಇದೇ ಮಾದರಿಯಲ್ಲಿ ಅಲಂಕಾರ ಮಾಡಲಾಗಿತ್ತು.
ನಗರದ ವೃತ್ತಗಳಿಗೆ ಬಣ್ಣ, ಬಣ್ಣದ ಅಲಂಕಾರ ಮಾಡಿದ್ದು ಎಲ್ಲರ ಗಮನ ಸೆಳೆಯಿತು. ಮದಕರಿನಾಯಕ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ, ಕನಕ ಸರ್ಕಲ್ ಸೇರಿದಂತೆ ಮತ್ತಿತರರ ವೃತ್ತಗಳಿಗೆ ಅಲಂಕಾರ ಮಾಡಿದ್ದರು.ಗಣೇಶನ ಮೆರವಣಿಗೆ ಹಿನ್ನಲೆಯಲ್ಲಿ ನಗರದ ಎಲ್ಲಾ ವೃತ್ತಗಳಿಗೆ ಅಲಂಕಾರ ಮಾಡಿದ ಹಿನ್ನೆಲೆಯಲ್ಲಿ ಝಗಮಗಿಸುತ್ತಿದ್ದವು.
ಹೊರ ಜಿಲ್ಲೆಗಳಿಂದ ಆಗಮನ: ರಾಜ್ಯದಲ್ಲಿಯೇ ಹೆಸರುವಾಸಿಯಾಗಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ದಾವಣಗೆರೆ, ಬಳ್ಳಾರಿ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ನಾನಾ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು.
ವಿಶ್ವ ಹಿಂದೂ ಪರಿಷದ್ ಬಜರಂಗದಳ ನೇತೃತ್ವದಲ್ಲಿ ನಡೆಯುವ ಹಿಂದೂ ಮಹಾಗಣಪತಿಯ ಬೃಹತ್ ಶೋಭಾ ಯಾತ್ರೆಯ ಉದ್ಘಾಟನೆಯನ್ನು ಶ್ರೀ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಕನ್ನೇರಿಮಠ ಕೊಲ್ಲಾಪುರ ಮಹಾರಾಷ್ಟ್ರ ಇವರ ನೆರವೇರಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಶಿವಲಿಂಗಾನಂದ ಮಹಾಸ್ವಾಮಿಗಳು ಕಬೀರಾನಂದ ಆಶ್ರಮ , ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜಿಗಳು, ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಜಿಗಳು ಭಗೀರಥ ಗುರುಪೀಠ ಮಧುರೈ , ಶ್ರೀ ಇಮ್ಮಡಿ ಕೇತೇಶ್ವರ ಮಹಾಸ್ವಾಮಿಜಿಗಳು ಮೇದಾರ ಗುರುಪೀಠ, ಶ್ರೀ ಸೇವಾಲಾಲ್ ಮಹಾಸ್ವಾಮಿಗಳು ಲಂಬಾಣಿ ಗುರುಪೀಠ. ಸಾನಿಧ್ಯವನ್ನು ವಹಿಸಿದರು ಈ ಸಂದರ್ಭದಲ್ಲಿ , ಹಿಂದೂ ಮಹಾಗಣಪತಿಯ ಸಮಿತಿಯ ಗೌರವಾಧ್ಯಕ್ಷರಾದ ಷಡಕ್ಷರಪ್ಪ ಕೊಂಡ್ಲಹಳ್ಳಿ ಹಾಗೂ ಹಿಂದೂ ಮಹಾಗಣಪತಿಯ ಅಧ್ಯಕ್ಷರಾದ ಜಿ.ಎಂ. ಸುರೇಶ್. ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ , ಶಾಸಕರಾದ ವೀರೇಂದ್ರ ಪಪ್ಪಿ , ಹೊಳಲ್ಕೆರೆ ಶಾಸಕರಾದ ಚಂದ್ರಪ್ಪ , ವಿಧಾನ ಪರಿಷತ್ ಸದಸ್ಯರಾದ ಕೆ ಎಸ್ ನವೀನ್ , ಎಂ.ಪಿ. ನಾರಾಯಣಸ್ವಾಮಿ , ಸಮಿತಿಯ ಮಾರ್ಗದರ್ಶಕರಾದ ಬದ್ರಿನಾಥ್, ಬಜರಂಗದಳ ಪ್ರಾಂತ ಸಹ ಸಂಯೋಜಕರು ಪ್ರಭಜನ್ , ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಪಿ. ರುದ್ರೇಶ್ , ಜಿಲ್ಲಾ ಸಹ ಕಾರ್ಯದರ್ಶಿ ಕೇಶವ್ , ಬಜರಂಗದಳ ಜಿಲ್ಲಾ ಸಂಯೋಜಕರು ಸಂದೀಪ್ , ಜಿಲ್ಲಾ ಮುಖಂಡರಾದ ಅಶೋಕ್ , ರಾಜೇಶ್ ನಗರಾಧ್ಯಕ್ಷರಾದ ಶ್ರೀನಿವಾಸ್, ನಗರ ಉಪಾಧ್ಯಕ್ಷರಾದ ರೋಹಿತ್, ಬಜರಂಗದಳ ನಗರ ಸಂಯೋಜಕರು ರಂಗಸ್ವಾಮಿ, ಗ್ರಾಮಾಂತರ ಅಧ್ಯಕ್ಷರಾದ ಶಶಿಧರ್ ಸಮಿತಿಯ ಸದಸ್ಯರಾದ. ವಿಪುಲ್ ಜೈನ್, ಕಾರ್ತಿಕ್, ಪ್ರಶಾಂತ್ ಅಪ್ಪಾಜಿ ಪರಿಸರ ತಿಪ್ಪೇಸ್ವಾಮಿ ಟೈಗರ್ , ವಿಕ್ರಂ ಜೈನ್ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.