i
ಜೆಡಿಎಸ್ ಪಕ್ಷ ಸಂಘಟನೆಗೆ ಬಿಡದಿಯಲ್ಲಿ ಸಭೆ ನಡೆಸಿದ ದಳಪತಿಗಳು…
ಚಂದ್ರವಳ್ಳಿ ನ್ಯೂಸ್, ರಾಮನಗರ: Leaders of the JDS party organization held a meeting in Bidadi…
ಭವಿಷ್ಯದ ರಾಜಕೀಯ ಬೆಳವಣಿಗೆ ಹಾಗೂ ಸಂಘಟನೆ ಉದ್ದೇಶದಿಂದ ಬಿಡದಿಯ ತೋಟದಲ್ಲಿ ರಾಮನಗರ ಜಿಲ್ಲೆಯ ಜನತಾ ದಳ(ಎಸ್) ಪಕ್ಷದ ಪ್ರಮುಖ ಮುಖಂಡರ ಸಭೆ ಕರೆಯಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲೆಯ ರಾಜಕೀಯ ಆಗುಹೋಗುಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಮಂಜುನಾಥ್, ಜಿಲ್ಲೆಯ ಹಿರಿಯ ಮುಖಂಡರಾದ ಸುಬ್ಬಾಶಾಸ್ತ್ರಿ, ಹಾಪ್ ಕಾಮ್ಸ್ ದೇವರಾಜು, ರಾಜು, ಪ್ರಸನ್ನಗೌಡ, ಕಬ್ಬಾಳೇ ಗೌಡ, ಚಿನ್ನಸ್ವಾಮಿ, ನಾಗರಕಲ್ಲುದೊಡ್ಡಿ ಶಿವಣ್ಣ, ನರಸಿಂಹ ಮೂರ್ತಿ ಸೇರಿದಂತೆ ರಾಮನಗರ, ಚನ್ನಪಟ್ಟಣ, ಮಾಗಡಿ ಹಾಗೂ ಕನಕಪುರ ವಿಧಾನಸಭೆ ಕ್ಷೇತ್ರಗಳ ಮುಖಂಡರು ಹಾಜರಿದ್ದರು.