i
ಕಂದಾಯ ಸಚಿವ ಕೃಷ್ಣ ಭೈರೇಗೌಡರಿಂದ ಅ.10 ರಂದು ಪ್ರಗತಿ ಪರಿಶೀಲನಾ ಸಭೆ…ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: Progress review meeting by Revenue Minister Krishna Bhairegowda on 10th… ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಅ. 10 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು (ವಿಪತ್ತು ನಿರ್ವಹಣೆ), ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಅಪರ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಸಿಲ್ದಾರರು, ಭೂದಾಖಲೆಗಳ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು, ಜಿಲ್ಲಾ ನೊಂದಣಾಧಿಕಾರಿಗಳು, ಉಪನೊಂದಣಾಧಿಕಾರಿಗಳು, ಉಪತಹಸಿಲ್ದಾರ್/ಶಿರಸ್ತೆದಾರರು, ಕಂದಾಯ ನಿರೀಕ್ಷಕರು, ಭೂಮಾಪಕರು, ಗ್ರಾಮ ಆಡಳಿತ ಅಧಿಕಾರಿಗಳು ಭಾಗವಹಿಸುವರು. ಸಭೆಯಲ್ಲಿ ಜಿಲ್ಲೆಯಲ್ಲಿನ ವಿಪತ್ತು ನಿರ್ವಹಣೆ, ಇ-ಆಫೀಸ್ ಅನುಷ್ಠಾನ, ಕೆರೆಗಳ ಒತ್ತುವರಿ ವಿವರ, ಭೂಪರಿವರ್ತಿನೆ, ತಹಸಿಲ್ದಾರ್, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿನ ಪ್ರಕರಣಗಳ ವಿಲೇವಾರಿ ಬಾಕಿ, 94ಸಿ ಮತ್ತು 94 ಸಿಸಿ ಸ್ಥಿತಿಗತಿ, ನೊಂದಣಿ ಮತ್ತು ಮುದ್ರಾಂಕ ಇಲಾಖಾ ವಿಷಯಗಳು, ಹೊಸ ಕಂದಾಯ ಗ್ರಾಮಗಳ ಘೋಷಣೆ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಯಲಿದೆ.