i
ವಿದ್ಯುತ್ ಲೋಡ್ ಶೆಡ್ಡಿಂಗ್ ವಿರೋಧಿಸಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ರೈತರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿದ್ಯುತ್ ಲೋಡ್ ಶೆಡ್ಡಿಂಗ್ ವಿರೋಧಿಸಿ ಅನ್ನದಾನ ಆಕ್ರೋಶ ವ್ಯಕ್ತ ಪಡಿಸಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿತ್ರದುರ್ಗ ನಗರದಲ್ಲಿ ಗುರುವಾರ ಜರುಗಿದೆ.
ಚಿತ್ರದುರ್ಗದ ಆರ್ಟಿಒ ಕಚೇರಿ ರಸ್ತೆಯಲ್ಲಿರುವ ಬೆಸ್ಕಾಂ ಕಚೇರಿಗೆ ನುಗ್ಗಿದ ರೈತರ 7 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ನೀಡುವಂತೆ ಒತ್ತಾಯಿಸಿದರು. ನೂರಾರು ಮಂದಿ ರೈತರು ಬೆಸ್ಕಾಂ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ರೈತರಿಗೆ ಮಾರಕವಾಗಿರುವ ಲೋಡ್ ಶೆಡ್ಡಿಂಗ್ ಕೂಡಲೇ ರದ್ದು ಮಾಡುವಂತೆ ಒತ್ತಾಯಿಸಿದರು.
ರೈತ ಸಂಘದ ಮುಖಂಡರು, ತಾಲೂಕಿವ ಮೂಲೆ ಮೂಲೆಗಳಿಂದ ನೂರಾರು ಸಂಖ್ಯೆಯಲ್ಲಿ ರೈತರು ಪಾಲ್ಗೊಂಡು ಬೆಸ್ಕಾಂ ಕಚೇರಿಗೆ ಮುತ್ತಿಗೆ ಪ್ರತಿಭಟಿಸಿದರು.