i
ತಾಲೂಕು ಮಟ್ಟದ ಕೆಡಿಪಿ ಸಮಿತಿಗೆ ಸರ್ಕಾರದ ನಾಮ ನಿರ್ದೇಶನಗೊಂಡ ದೊಡ್ಡಘಟ್ಟ ಶಿವಕುಮಾರ್…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಾಂಗ್ರೆಸ್ ಪಕ್ಷದ ತತ್ವ ಮತ್ತು ಸಿದ್ದಾಂತಗಳನ್ನು ಒಪ್ಪಿ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಬೂತ್ ಏಜೆಂಟಾಗಿ ಮತ್ತು ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದ ದೊಡ್ಡಘಟ್ಟ ಗ್ರಾಮದ ವಕೀಲ ಸಿ.ಶಿವಕುಮಾರ್ ಅವರನ್ನು ಹಿರಿಯೂರು ತಾಲೂಕು ಮಟ್ಟದ ಕೆ .ಡಿ. ಪಿ. ಸಮಿತಿಗೆ ಸರ್ಕಾರದ ನಾಮ ನಿರ್ದೇಶಕ ಸದಸ್ಯನಾಗಿ ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಗುರುತಿಸಿ ಆಯ್ಕೆ ಮಾಡಲು ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಕೆಪಿಸಿಸಿ ಸದಸ್ಯ ಅಮೃತೇಶ್ ಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ, ಕಾಂಗ್ರೆಸ್ ಪಕ್ಷದ ಎಲ್ಲ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರುಗಳಿಗೆ, ಉಪಾಧ್ಯಕ್ಷರುಗಳಿಗೆ, ಸದಸ್ಯರುಗಳಿಗೆ ಹಾಗೂ ತಾಲೂಕು ಪಂಚಾಯತಿಯ ಎಲ್ಲ ಮಾಜಿ ಅಧ್ಯಕ್ಷರುಗಳು ಉಪಾಧ್ಯಕ್ಷರುಗಳಿಗೆ ಮತ್ತು ಸದಸ್ಯರುಗಳಿಗೆ, ನಗರಸಭೆಯ ಎಲ್ಲಾ ಕಾಂಗ್ರೆಸ್ ಪಕ್ಷದ ಸದಸ್ಯರುಗಳಿಗೆ ಮತ್ತು ವಿವಿಧ ಘಟಕದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳಿಗೆ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಶಿವಕುಮಾರ್ ಧನ್ಯವಾದಗಳನ್ನು ತಿಳಿಸಿದ್ದಾರೆ.