i
ಸ್ತ್ರೀ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್ ಸ್ಥಾಪನೆ-ಸಿಎಂ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ಸ್ತ್ರೀಯರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಲಯದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕ ಅಭಿವೃದ್ಧಿಯ ವೇಗ ಹೆಚ್ಚಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
ಅವರು ಮೈಸೂರಿನಲ್ಲಿ ಮಾತನಾಡಿ, ಇದಕ್ಕಾಗಿ ಸ್ತ್ರೀಯರು ಉದ್ಯಮ, ಕೈಗಾರಿಕೆ, ಸೇವಾ ವಲಯದಲ್ಲಿ ಭಾಗವಹಿಸುವುದು ಅತಿ ಮುಖ್ಯ. ಸ್ತ್ರೀ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆಗೆ ವಹಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದರು.
ಪೆಟ್ರೋಲ್ ಬಂಕ್ಗಳ ಸ್ಥಾಪನೆಗೆ ಭೂಮಿ, ತರಬೇತಿ, ಪರವಾನಗಿ ಸೇರಿದಂತೆ ಅಗತ್ಯ ಬೆಂಬಲ ನೀಡುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದೇವೆ. ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.