i
ಮೈಸೂರು ದಸರಾ ಜಂಬೂಸವಾರಿ ಉತ್ಸವಕ್ಕೆ ಲಕ್ಷಾಂತರ ಭಕ್ತರು…
ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೈಸೂರಿನ ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಮೈಸೂರಿನಲ್ಲಿ ನಡೆಯುತ್ತಿರುವ ವೈಭವಪೂರಿತ ದಸರಾ ಉತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಜಯದಶಮಿ ಅಥವಾ ಜಂಬೂಸವಾರಿಗೆ ಚಾಲನೆ ನೀಡಿದರು. ಕಳೆದ 9 ದಿನಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅರಮನೆಯಲ್ಲಿ ಖಾಸಗಿ ದರ್ಬಾರ ನಡೆಯಿತು.
ದಸರಾ ಜಂಬೂಸವಾರಿ ಮೆರವಣಿಗೆ ಅದ್ದೂರಿಯಾಗಿ ನಡೆಯುತ್ತಿದ್ದು, ಜಂಬೂಸವಾರಿಯು ಅಭಿಮನ್ಯು ಮೇಲೆ ಚಾಮುಂಡೇಶ್ವರಿ ವಿರಾಜಮಾನವಾಗಿ ಕುಳಿತಿದ್ದು, ಜಂಬೂಸವಾರಿ ಸಾಗುವ ರಸ್ತೆಯುದ್ದಕ್ಕೂ ಲಕ್ಷಾಂತರ ಜನ ನೆರೆದಿದ್ದಾರೆ.
ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆ ಆಯುರ್ವೇದಿಕ್ ಕಾಲೇಜು ವೃತ್ತದ ಮೂಲಕ ಸಾಗಿತು. ತಾಯಿ ಚಾಮುಂಡೇಶ್ವರಿ ಅಭಿಮನ್ಯು ಮೇಲೆ ವಿರಾಜಮಾನವಾಗಿ ಕುಳಿತಿರುವಳು. ಜಂಬೂಸವಾರಿ ಸಾಗುವ ರಸ್ತೆ ಯುದ್ದಕ್ಕೂ ನೆರೆದಿರುವ ಜನ, ಚಾಮುಂಡೇಶ್ವ ವಿಗ್ರಹಕ್ಕೆ ನಮಿಸುತ್ತಿರುವ ದೃಶ್ಯಾವಳಿಗಳು ಕಂಡು ಬಂದವು.
ಬನ್ನಿಮಂಟಪದ ಮೈದಾನದಲ್ಲಿ ಮಂಗಳವಾರ ಸಂಜೆ 7 ಗಂಟೆಗೆ ಪಂಜಿನ ಕವಾಯತು ನಡೆಯಿತು. ಇದರಲ್ಲಿ ಪೊಲೀಸ್ ಇಲಾಖೆಯಿಂದ ಸಾಹಸ ಕ್ರೀಡೆಗಳ ಅದ್ಭುತ ಪ್ರದರ್ಶನ ನಡೆಯಿತು. ಡ್ರೋನ್ ಲೈಟ್, ಬೈಕ್ ಸ್ಟಂಟ್ಸ್, ಕುದುರೆ ಸವಾರಿ, ಪಂಜಿನ ಕವಾಯಾತು, ಟೆಂಟ್ ಪೀಕಿಂಗ್, ಲೇಸರ್ ಲೈಟ್ ಸೇರಿದಂತೆ ಅನೇಕ ಸಾಹಸ ಕ್ರೀಡೆಗಳ ಪ್ರದರ್ಶನವನ್ನು ಪೊಲೀಸರು ನಡೆಸಿಕೊಟ್ಟರು.
ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗುತ್ತಿದ್ದು, ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡಿದ್ದವು.
ಅರಮನೆಯಿಂದ ಬನ್ನಿಮಂಟಪದವರೆಗೆ ಈ ಜಂಬೂಸವಾರಿ ಸಾಗಲಿದೆ. ಈ ವೇಳೆ ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿವೆ.
ಮೈಸೂರು ಅರಮನೆಯಿಂದ ಹೊಡಲಿರುವ ಜಂಬೂ ಸವಾರಿ, ಕೆ.ಆರ್.ಸರ್ಕಲ್ , ಆರ್ಯವೇದ ಸರ್ಕಲ್, ತಿಲಕ್ ನಗರ, ಬಂಬೂ ಬಜಾರ್ ಮೂಲಕ ಬನ್ನಿ ಮಂಟಪ್ಪದ ಮೂಲಕ ಸಾಗಿತು.
ಸುಮಾರು ೪4ರಿಂದ 5 ಕಿಲೋ ಮೀಟರ್ ದೂರಕ್ಕೆ ಈ ಸವಾರಿ ನಡೆಯಿತು. ಲಕ್ಷಾಂತರ ಜನರು ದಸರಾ ಜಂಬೂಸವಾರಿಗೆ ಸಾಕ್ಷಿಯಾಗಿದ್ದರು.
ಜಂಬೂ ಸವಾರಿ ಹೊತ್ತ ಆನೆಗಳ ಪೂರ್ಣ ಮಾಹಿತಿ-
೧)ಅಭಿಮನ್ಯು ೫೭ವರ್ಷ,ಮತ್ತಿಗೋಡು ಆನೆ ಶಿಬಿರ,೨೭೪ಮೀ ಎತ್ತರ, ೪,೭೦೦ರಿಂದ ೫,೦೦೦ಕೆಜಿ. ೨) ವಿಜಯ ೬೩ವರ್ಷ,ದುಬಾರೆ ಆನೆ ಶಿಬಿರ, ೨೪೪ಮೀ ಎತ್ತರ, ೩,೨೫೦ರಿಂದ ೩,೫೦೦ಕೆಜಿ. ೩) ವರಲಕ್ಷ್ಮಿ ೬೭ವರ್ಷ, ಭೀಮನಕಟ್ಟೆ, ೨೩೬ಮೀ ಎತ್ತರ, ೩,೩೦೦ರಿಂದ ೩,೫೦೦ಕೆಜಿ. ೪) ಅರ್ಜುನ ೬೫ವರ್ಷ, ಬಳ್ಳೆ, ೨೮೮ಮೀ ಎತ್ತರ, ೫,೮೦೦ರಿಂದ ೬,೦೦೦ ಕೆಜಿ. ೫) ಧನಂಜಯ ೪೩ವರ್ಷ, ದುಬಾರೆ, ೨೮೦ಮೀ ಎತ್ತರ,೪,೦೦೦ರಿಂದ ೪,೨೦೦ ಕೆಜಿ. ೬) ಮಹೇಂದ್ರ ೪೦ವರ್ಷ, ಮತ್ತಿಗೋಡು, ೨೭೫ಮೀ ಎತ್ತರ, ೩,೮೦೦ರಿಂದ ೪,೦೦೦ ಕೆಜಿ. ೭) ಭೀಮ ೨೩ವರ್ಷ, ಮತ್ತಿಗೋಡು, ೨೮೫ಮೀ ಎತ್ತರ, ೩,೮೦೦ರಿಂದ ೪,೦೦೦ಕೆಜಿ. ೮) ಗೋಪಿ ೪೧ವರ್ಷ, ದುಬಾರೆ, ೨೮೬ಮೀ ಎತ್ತರ, ೩,೭೦೦ರಿಂದ ೩,೮೦೦ಕೆಜಿ. ೯) ಪ್ರಶಾಂತ್ ೫೦ವರ್ಷ, ದುಬಾರೆ,೩೦೦ಮೀ ಎತ್ತರ,,೪೦೦೦ರಿಂದ ೪,೨೦೦ಕೆಜಿ. ೧೦) ಸುಗ್ರೀವ ೪೧ವರ್ಷ,ದುಬಾರೆ,೨೭೭ಮೀ ಎತ್ತರ, ೪,೦೦೦ರಿಂದ ೪,೧೦೦ಕೆಜಿ. ೧೧)ಕಂಜನ್ ೨೪ವರ್ಷ,ದುಬಾರೆ, ೨೬೨ಮೀ ಎತ್ತರ, ೩,೭೦೦ರಿಂದ ೩,೯೦೦ಕೆಜಿ. ೧೨)ರೋಹಿತ್ ೨೧ವರ್ಷ, ರಾಮಾಪುರ,೨೭೦ಮೀ ಎತ್ತರ, ೨,೯೦೦ರಿಂದ ೩,೦೦೦ಕೆಜಿ. ೧೩)ಲಕ್ಷ್ಮಿ ೫೨ ವರ್ಷ, ದೊಡ್ಡಹರವೆ, ೨೫೨ ಮೀ. ಎತ್ತರ, ೩,೦೦೦ರಿಂದ ೩,೨೦೦ಕೆಜಿ. ೧೪) ಹಿರಣ್ಯ ೪೬ ವರ್ಷ, ರಾಮಾಪುರ, ೨೫೦ಮೀ ಎತ್ತರ, ೩,೦೦೦ರಿಂದ ೩,೨೦೦ಕೆಜಿ ತೂಕವಿದ್ದು, ಕಂಜನ್, ಲಕ್ಷ್ಮೀ ಹಾಗೂ ಹಿರಣ್ಯರಿಗೆ ಇದು ಮೊದಲ ದಸರಾವಾಗಿದೆ. ಅರ್ಜುನ ಈ ಬಾರಿಯ ದಸರಾ ಮಹೋತ್ಸವದ ಹಿರಿಯ ವಯಸ್ಸಿನ ಆನೆಯಾಗಿದೆ. ರೋಹಿತ್ ಅತ್ಯಂತ ಕಿರಿಯ ವಯಸ್ಸಿನ ಆನೆ ಹಾಗೂ ಮೊದಲ ಬಾರಿಗೆ ದಸರಾದಲ್ಲಿ ಭಾಗಿಯಾಗುದೆ
49 ಟ್ಯಾಬ್ಲೋಗಳು-
ಬಾಗಲಕೋಟೆ-ಬಾದಾಮಿ ಚಾಲುಕ್ಯರ ರಾಜವಂಶ&ಬನಶಂಕರಿ ದೇವಿ ಟ್ಯಾಬ್ಲೋ, ಬಳ್ಳಾರಿ-ಕುಮಾರಸ್ವಾಮಿ ದೇವಸ್ಥಾನ, ಪಾರ್ವತಿ ದೇವಾಲಯ ಟ್ಯಾಬ್ಲೋ, ಬೆಳಗಾವಿ-ಮಹಾಲಿಂಗೇಶ್ವರ ದೇವಸ್ಥಾನ, ಗೋಕಾಕ್? ಫಾಲ್ಸ್?, ಸುವರ್ಣಸೌಧ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸ್ತಬ್ಧಚಿತ್ರ, ಬೆಂಗಳೂರು ಗ್ರಾಮಾಂತರ-ದಕ್ಷಿಣ ಕಾಶಿ ಶಿವಗಂಗೆ ದೇವಸ್ಥಾನ ಟ್ಯಾಬ್ಲೋ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ-ಚಂದ್ರಯಾನ-೩ ಸ್ತಬ್ಧಚಿತ್ರ, ಬೀದರ್-ಕೃಷ್ಣಮೃಗ ಸಂರಕ್ಷಣಾಧಾಮದ ಅರಣ್ಯ ಪ್ರದೇಶ ಟ್ಯಾಬ್ಲೋ, ಚಾಮರಾಜನಗರ-ಜಾನಪದ, ಭಕ್ತಿಯ ಬೀಡು ಹುಲಿ, ಆನೆಗಳ ಸಂತೃಪ್ತಿಯ ಕಾಡು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ-ಏಕತೆಯಲ್ಲಿ ಅನೇಕತೆ ಸ್ತಬ್ಧಚಿತ್ರ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ-ಬೆಟ್ಟದಿಂದ ಬಟ್ಟಲಿಗೆ ಸ್ತಬ್ಧಚಿತ್ರ, ಚಿತ್ರದುರ್ಗ-ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಟ್ಯಾಬ್ಲೋ, ದ.ಕನ್ನಡ-ಪಿಲಕುಳ ಗುತ್ತಿನಮನೆ, ವಿವೇಕಾನಂದ ತಾರಾಲಯ, ಬೀಚ್ ಸರ್ಫಿಂಗ್, ದಾವಣಗೆರೆ-ಸಂತ ಸೇವಾಲಾಲ ಹುಟ್ಟೂರು ಮತ್ತು ಬಂಜಾರ ಸಂಪ್ರದಾಯ, ಧಾರವಾಡ-ಧಾರವಾಡ ಪೇಡಾ, ಧಾರವಾಡಿ ಎಮ್ಮೆ ನಮ್ಮ ಹೆಮ್ಮೆ ಟ್ಯಾಬ್ಲೋ, ಗದಗ ಜಿಲ್ಲೆ-ಸಬರಮತಿ ಆಶ್ರಮ ಸ್ತಬ್ಧಚಿತ್ರ, ಹಾಸನ- ಹಾಸನಾಂಬ ದೇವಾಲಯ, ಹಲ್ಮಡಿ ಈಶ್ವರ ದೇವಸ್ಥಾನ ಟ್ಯಾಬ್ಲೋ, ಹಾವೇರಿ-ಶಂಕನಾದ ಮೊಳಗಿಸುತ್ತಿರುವ ಕನಕದಾಸರು & ಗದ್ದಿಗೆ ಕಾಗಿನೆಲೆ, ಕಲಬುರಗಿ-ರಾಜವಂಶಸ್ಥರ ಕೋಟೆ, ಚಿಂಚೋಳಿ ಅರಣ್ಯಪ್ರದೇಶ ವನ್ಯಜೀವಿ ಧಾಮ, ಕೊಡಗು ಜಿಲ್ಲಾ ಪಂಚಾಯಿತಿ-ಕೊಡಗಿನ ಪ್ರೇಕ್ಷಣೀಯ ಸ್ಥಳ ಸ್ತಬ್ಧಚಿತ್ರ, ಕೋಲಾರ-ನರೇಗಾ ಯೋಜನೆಯಡಿ ವೀರಗಲ್ಲುಗಳ ಉತ್ಖನನ ಮತ್ತು ಮರುಸ್ಥಾಪನೆ, ಕೊಪ್ಪಳ-ಕಿನ್ನಾಳ ಕಲೆ ಹಾಗೂ ಕೈಮಗ್ಗ ಸ್ತಬ್ಧಚಿತ್ರ, ಮಂಡ್ಯ-ಸಾಂಪ್ರದಾಯಿಕ ಉದ್ಯಮ ಆಲೆಮನೆ ಸ್ತಬ್ಧಚಿತ್ರ, ಮೈಸೂರು-ನಾಲ್ವಡಿ ಕೃಷ್ಣರಾಜ ಒಡೆಯರ್? ಕೊಡುಗೆಗಳ ಸ್ತಬ್ಧಚಿತ್ರ, ರಾಯಚೂರು-ನವರಂಗ ದರ್ವಾಜ ಹಾಗೂ ಆರ್?ಟಿಪಿಎಸ್? ಟ್ಯಾಬ್ಲೋ, ರಾಮನಗರ-ಚನ್ನಪಟ್ಟಣದ ಚೆಂದದ ಗೊಂಬೆಗಳು ಇತ್ಯಾದಿ ಕಲೆಗಳು, ಶಿವಮೊಗ್ಗ-ಕುವೆಂಪು ಪ್ರತಿಮೆ, ಕುಪ್ಪಳ್ಳಿ, ಗುಡವಿ ಪಕ್ಷಿಧಾಮ, ನಗರ ಕೋಟೆ, ಹುಲಿ ಸಿಂಹಧಾಮ, ಶಿವಪ್ಪ ನಾಯಕ ಪ್ರತಿಮೆ ಟ್ಯಾಬ್ಲೋ ಮೆರವಣಿಗೆಯಲ್ಲಿ ಇರಲಿವೆ.ಮೈಸೂರು: ಜಂಬೂಸವಾರಿ ಹಿನ್ನೆಲೆಯಲ್ಲಿ ಮೈಸೂರಿನ ಕೆಆರ್? ಸರ್ಕಲ್?ನಲ್ಲಿ ಜನರ ಓಡಾಟಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಜನರು ರಸ್ತೆಯ ಇಕ್ಕೆಲಗಳಲ್ಲಿ ಜಮಾವಣೆಗೊಂಡಿದ್ದಾರೆ. ಅರಮನೆಯಿಂದ ಕೆಆರ್? ಸರ್ಕಲ್ ಮೂಲಕ ಜಂಬೂ ಸವಾರಿ ಹಾದು ಹೋಗುತ್ತದೆ. ಬಂಜೂ ಸವಾರಿ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಜಂಬೂ ಸವಾರಿಯಲ್ಲಿ ತುಮಕೂರು-ಮೂಡಲಪಾಯ ಯಕ್ಷಗಾನ, ತವರು ಸ್ತಬ್ದಚಿತ್ರ, ಉಡುಪಿ-ತ್ಯಾಜ್ಯ ಮುಕ್ತ ಮತ್ಸ್ಯಸ್ನೇಹಿ ಸಮುದ್ರ, ಉತ್ತರ ಕನ್ನಡ- ಶರಾವತಿ ಮಡಿಲಲ್ಲಿ ವನ್ಯಜೀವಿ ಹಾಗೂ ಸಿಂಹದ ಬಾಲದ ಸಂಗಳಿಕ ಸಂರಕ್ಷಣೆ, ವಿಜಯಪುರ-ಜ್ಞಾನ ಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿ, ವಿಜಯನಗರ- ವಿಠಲ ದೇವಸ್ಥಾನ, ಯಾದಗಿರಿ-ವೇಣುಗೋಪಾಲಸ್ವಾಮಿ ದೇವಸ್ಥಾನ, ಸ್ತಬ್ದಚಿತ್ರ ಉಪಸಮಿತಿ- ಅರಮನೆ ವಾದ್ಯಗೋಷ್ಠಿ, ಸ್ತಬ್ದಚಿತ್ರ ಉಪಸಮಿತಿ-ಹೊಯ್ಸಳ ದೇವಸ್ಥಾನ, ಬೇಲೂರು ಹಳೇಬೀಡು ಸೋಮನಾಥಪುರ ದೇಗುಲ, ಸಮಾಜಕಲ್ಯಾಣ ಇಲಾಖೆ-ಸಂವಿಧಾನ ಪೀಠಿಕೆ, ಇಲಾಖೆ ಯೋಜನೆಗಳು, ವಾರ್ತಾ ಮತ್ತು ಪ್ರಚಾರ ಇಲಾಖೆ- ಸರ್ಕಾರದ ಗ್ಯಾರಂಟಿ ಯೋಜನೆಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಗೃಹಲಕ್ಷ್ಮೀ ಯೋಜನೆ ಮತ್ತು ಇತರೆ ಯೋಜನೆಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ-ವಾಲ್ಮಿಕಿ ಪುತ್ಥಳಿ ಮತ್ತು ಇಲಾಖೆಯ ಯೋಜನೆ, ಆಹಾರ ಇಲಾಖೆ-ಹಸಿವಿನಿಂದ ಯಾರೂ ಬಳಲಬಾರದು ಅದಕ್ಕಾಗಿ ಅನ್ನಭಾಗ್ಯ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ-ಶೌರ್ಯ-ನ್ಯಾಯ-ರಕ್ಷೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ-ಅಂಗಾಂಗ ದಾನ, SಖಿಇಒI, ಆಶಾಕಿರಣ, ಸಹಕಾರಿ ಹಾಲು ಉತ್ಪಾದಕರ ಮಹಲಾ ಮಂಡಳಿ ನಿಯಮಿತ-ಕ್ಷೀರಭಾಗ್ಯ ಯೋಜನೆ, ಚೆಸ್ಕಾಂ-ಗೃಹಜ್ಯೋತಿ, ಕೃಷಿ ಸೋಲಾರ ಸೆಟ್?, ಗ್ರಾಹಕರ ಸಲಹಾ ಸಮಿತಿ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ-ಮೈಸೂರು ವೈದ್ಯಕೀಯ ಮಹಾವಿದ್ಯಾಲಯ, ಪ್ರವಾಸೋದ್ಯಮ ಇಲಾಖೆ-ಲಕ್ಕುಂಡಿ ಬ್ರಹ್ಮ ದೇವಾಲಯ ಕಾವೇರಿ ನೀರಾವರಿ ನಿಗಮ-ಸಹಭಾಗಿತ್ವದ ನೀರಾವರಿ ನಿರ್ವಹಣಾ ಪದ್ಧತಿ, ವಾಕ್? ಶ್ರವಣ ಸಂಸ್ಥೆ-ವಾಕ್ ಶ್ರವಣ ದೋಷದಿಂದ ಉತ್ತಮ ಜೀವನದೆಡೆಗೆ ಆಯುಷ್?ನ ಕೊಡುಗೆ, ಜಗಜೀವನ ರಾಮ್ ಚರ್ಮ ಕೈಗಾರಿಕ ಅಭಿವೃದ್ಧಿ ನಿಗಮ-ಲಿಡ್?ಕರ್ ಅಪ್ಪಟ ಚರ್ಮ ಉತ್ಪನ್ನಗಳ ಆಗರ ಮತ್ತು ಚರ್ಮ ಕುಶಲಕರ್ಮಿಗಳ ಅಭಿವೃದ್ಧಿ ಆಶಾಕಿರಣ ಸಮಾಜ ಕಲ್ಯಾಣ ಇಲಾಖೆ-ಭಾರತೀಯ ಸಂವಿಧಾನ ಮತ್ತು ಡಾ. ಬಿಆರ್.ಅಂಬೇಡ್ಕರ್, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ- ಸಂವಿಧಾನ ಪೀಠಿಕೆ ಓದು ಕಡ್ಡಾಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಸಾಗಿದವು.