i
ದೇಶ ಕಂಡ ಇಬ್ಬರು ಮಹಾನ್ ಶಕ್ತಿಗಳ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಜವಾಬ್ದಾರಿ ನಮ್ಮದು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: It is our responsibility to convey to the next generation the contributions of two great powers that the country has seen…
ದೇಶ ಕಂಡ ಇಬ್ಬರು ಮಹಾನ್ ಶಕ್ತಿಗಳನ್ನ ಇಂದು ಸ್ಮರಿಸುತ್ತಾ ಅವರ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಜವಾಬ್ದಾರಿ ನಮ್ಮದು ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಹಾಗೂ ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾರತದ ಇಬ್ಬರು ಮಹಾನ್ ಚೇತನರಿಗೆ ಗೌರವ ನಮನ ಸಲ್ಲಿಸಿ ನಂತರ ಅವರು ಮಾತನಾಡಿದರು.
ನಾನು ಒಂದು ವೇಳೆ ದೇಶ ಸೇವೆ ಸಂದರ್ಭದಲ್ಲಿ ಸಾವನ್ನಪ್ಪಿದರೆ ಅದಕ್ಕಾಗಿ ನಾನು ಹೆಮ್ಮೆ ಪಡುತ್ತೇನೆ. ನನ್ನ ರಕ್ತದ ಪ್ರತಿಯೊಂದು ಹನಿಯೂ ಈ ದೇಶದ ಶಕ್ತಿಶಾಲಿಯಾಗಲು ನೆರವಾಗುತ್ತದೆ ಎನ್ನುವ ಇಂದಿರಾ ಗಾಂಧಿಯವರ ಮಾತು ಅವರ ದೇಶಭಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಿಳಿಸಿದರು.
ತಮ್ಮ ಜನಪರ ಆಡಳಿತದ ಮೂಲಕ ಇಡೀ ದೇಶದಲ್ಲೇ ದೊಡ್ಡ ಕ್ರಾಂತಿ ಮಾಡಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಭಾರತದ ಪ್ರತಿಯೊಬ್ಬ ಪ್ರಜೆಯ ಮನದಲ್ಲಿ ಸದಾ ಅಮರರಾಗಿದ್ದಾರೆ ಎಂದು ಅವರು ತಿಳಿಸಿದರು.