i
ರಾಷ್ಟ್ರ ರಾಜಧಾನಿಯಲ್ಲಿ ಕೋಟೆ ನಾಡಿನ ಯುವಕರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: The youth of Kote Nadi in the national capital…
ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರ ಸರ್ಕಾರದ ಅಮೃತ ಮಹೋತ್ಸವದ ಅಂಗವಾಗಿ ಆಯೋಜನೆ ಮಾಡಿರುವ ನನ್ನ ದೇಶ, ನನ್ನ ಮಣ್ಣು, ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಗ್ರಾಮಗಳಿಂದ ಸಂಗ್ರಹ ಮಾಡಿದ ಮಣ್ಣನ್ನು ಅಮೃತ ಕಲಶಕ್ಕೆ ಹಾಕಲಾಯಿತು.
ಈ ಸಂದರ್ಭದಲ್ಲಿ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಕೇಂದ್ರ ರಾಜ್ಯ ಸಚಿವರು ಹಾಗೂ ಚಿತ್ರದುರ್ಗ ಲೋಕಸಭಾ ಸದಸ್ಯ ಎ. ನಾರಾಯಣಸ್ವಾಮಿಯವರ ಜೊತೆಯಲ್ಲಿ ನೆಹರು ಯುವಕೇಂದ್ರ, ಚಿತ್ರದುರ್ಗದ ಸ್ವಯಂ ಸೇವಕರಾದ ಕರಿಯಣ್ಣ.ಡಿ ಮತ್ತು ಅವರ ತಂಡದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.