i
ಶಿವಮೊಗ್ಗದಲ್ಲಿ ನ.5ರಂದು ಅನುದಾನಿತ ಪಿಂಚಣಿ ವಂಚಿತ ನೌಕರರ ಬೃಹತ್ ಸಮಾವೇಶ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು. A massive convention of employees deprived of subsidized pensions will be held in Shimoga on November 5…
ರಾಜ್ಯ ಅನುದಾನಿತ ಶಾಲಾಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘಟನೆ ನೇತೃತ್ವದಲ್ಲಿ ನ.5ರಂದು ಶಿವಮೊಗ್ಗ ತೇವರಚಟ್ನಳ್ಳಿಯ ಫೇಸ್ ಕಾಲೇಜು ಆವರಣದ ಸಭಾಂಗಣದಲ್ಲಿ ಅನುದಾನಿತ ಪಿಂಚಣಿ ವಂಚಿತ ನೌಕರರ ಬೃಹತ್ ಸಮಾವೇಶ ಆಯೋಜಿಸಿದ್ದು, ನೌಕರರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಗೌರವಾಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ಅನೇಕ ವರ್ಷಗಳಿಂದ ರಾಜ್ಯದ ಅನುದಾನಿತ ಶಾಲಾಕಾಲೇಜುಗಳಲ್ಲಿ ೨೦೦೬ರ ಪೂರ್ವ ಮತ್ತು ನಂತರದಲ್ಲಿ ನೇಮಕಾತಿ ಹೊಂದಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ನೌಕರರು ಪಿಂಚಣಿ ಇಲ್ಲದೆ ದುಡಿಯುತ್ತಿದ್ದಾರೆ. ಈಗಾಗಲೇ ಸಮಾರು ಮೂರು ಸಾವಿರ ನೌಕರರು ನಿವೃತ್ತರಾಗಿ ಸರಕಾರದಿಂದ ಬಿಡಿಗಾಸಿನ ಪರಿಹಾರವಿಲ್ಲದೆ ಅತ್ಯಂತ ಕಷ್ಟದ ಬದುಕು ಸಾಗಿಸುತ್ತಿದ್ದಾರೆ. ನಾನಾ ಕಾರಣಗಳಿಂದ ಅಕಾಲಿಕವಾಗಿ ನಿಧನರಾದ ಕುಟುಂಬಗಳು ಬೀದಿ ಪಾಲಾಗಿದ್ದಾರೆ ಎಂದರು.
ಪಿಂಚಣಿ ಬೇಡಿಕೆ ಮತ್ತು ನಿಶ್ಚಿತ ಪಿಂಚಣಿ ಅನುಷ್ಠಾನಕ್ಕಾಗಿ ದಶಕಗಳಿಂದ ಹತ್ತು ಹಲವು ಹೋರಾಟ ಮಾಡಿದ್ದೇವೆ. ಕಳೆದ ವರ್ಷ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ೧೪೧ದಿನಗಳ ಐತಿಹಾಸಿಕ ಹೋರಾಟ ಮಾಡಿದ್ದೇವೆ. ಈ ವೇಳೆಯಲ್ಲಿ ಕೆಲವರು ತಮ್ಮ ಜೀವಗಳನ್ನು ಕಳೆದುಕೊಂಡಿದ್ದಾರೆ ಇಷ್ಟಾದರೂ ಯಾವ ಸರಕಾರಗಳು ಅನುದಾನಿತ ನೌಕರರ ಅಳಲು ಆಲಿಸುವ ಕೆಲಸ ಮಾಡಲಿಲ್ಲ. ಆದ್ದರಿಂದ ಈ ಸಮಾವೇಶ ಆಯೋಜಿಸಿದ್ದು, ನಮ್ಮ ಭರವಸೆ ಈಡೇರುವ ನೀರೀಕ್ಷೆಯಿದ್ದು, ಜಿಲ್ಲೆಯ ಎಲ್ಲಾ ನೌಕರರು ಭಾಗವಹಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ ಮಾತನಾಡಿ ಸಮಾವೇಶದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ, ವಿಪಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ಹಾಲಿ ಮತ್ತು ಮಾಜಿ ಶಾಸಕರು, ಸರಕಾರಿ ಮತ್ತು ಅನುದಾನಿತ ಶಾಲೆ ಕಾಲೇಜುಗಳ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಕೀರ್ತಿಕುಮಾರ್, ಕಾರ್ಯದರ್ಶಿ ಡಾ.ಮಹೇಶ್, ಕಾರ್ಯಾಧ್ಯಕ್ಷ ಡಾ.ಅನಂತ ರಾಮಯ್ಯ, ಖಜಾಂಚಿ ದುರ್ಗೇಶ್ ಇತರರಿದ್ದರು.