i
ಕೃಷಿಕರ ಅನುಕೂಲಕ್ಕಾಗಿ 600ಕ್ಕೂ ಹೆಚ್ಚು ಯಂತ್ರಧಾರೆ ಕೇಂದ್ರಗಳ ಸ್ಥಾಪನೆ– ಕೃಷಿ ಸಚಿವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: Establishment of more than 600 machine transfer centers for the benefit of farmers – Minister of Agriculture…
ರಾಜ್ಯದಲ್ಲಿ ಕೃಷಿಕರ ಅನುಕೂಲಕ್ಕಾಗಿ ಸರ್ಕಾರವು 600ಕ್ಕೂ ಹೆಚ್ಚು ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಯಂತ್ರೀಕರಣ ಪ್ರೋತ್ಸಾಹ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ ಕೃಷಿ ಯಂತ್ರ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರು, ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆದ್ಯತೆಯಾಗಿದೆ. ರಾಜ್ಯದಲ್ಲಿ ಹೈಟೆಕ್ ಕಟಾವು ಹಬ್ ಸ್ಥಾಪನೆಗೆ 50 ಕೋಟಿ ಮೀಸಲಿರಿಸಲಾಗಿದ್ದು, 70:30ರ ಸಹಾಯಧನ – ಬಂಡವಾಳ ಹೂಡಿಕೆ ಅನುಪಾತದಲ್ಲಿ ರೈತರೇ ಇದನ್ನು ಸ್ಥಾಪಿಸಿ ನಡೆಸಬಹುದಾಗಿದೆ. ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆ ವತಿಯಿಂದ ಖಾಸಗಿಯಾಗಿ ವಿದ್ಯಾರ್ಥಿಗಳಿಗೆ ಕೃಷಿಯಲ್ಲಿ ತಾಂತ್ರಿಕ ಶಿಕ್ಷಣ ನಿಡುತ್ತಿರುವುದು ಹಾಗೂ ಕೃಷಿಗೆ ಪೂರಕವಾದ ಯಂತ್ರ ಮೇಳವನ್ನು ಆಯೋಜಿಸಿರುವುದು ಅಭಿನಂದನಾರ್ಹ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ. ಕಾವೇರಿ, ನಮ್ಮ ನಾಡಿನ ಜೀವನದಿ ಕೊಡಗಿನಲ್ಲಿ ಹುಟ್ಟಿ ರಾಜ್ಯದ ಕೋಟ್ಯಾಂತರ ಜನರ ಜೀವನಾಧಾರವಾಗಿ ಹರಿಯುತ್ತಿದೆ. ಈ ಬಾರಿ ಬರ ಪರಿಸ್ಥಿತಿ ತಲೆದೋರಿದ್ದು, ನೀರಿನ ಹಂಚಿಕೆ ಸಮಸ್ಯೆಯೂ ಉದ್ಭವವಾಗಿದೆ. ಕೇಂದ್ರಕ್ಕೆ ಬೆಳೆ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೇವೆ. ರಾಜ್ಯ ಸರ್ಕಾರ ರೈತರ ಹಿತ ಕಾಯಲು ಬದ್ದವಾಗಿದೆ ಎಂದು ಅವರು ತಿಳಿಸಿದರು.
ಕೊಡಗು ವಿಭಿನ್ನ ಸಂಸ್ಕೃತಿ, ಸುಂದರ ಪ್ರಕೃತಿ ಹೊಂದಿರುವ ವೀರರ ನಾಡು. ಇಲ್ಲಿಗೆ ಭೇಟಿ ನೀಡುವುದೇ ಒಂದು ಸಂತೋಷ ಎಂದು ಅವರು ಅಭಿಮಾನದ ನುಡಿಗಳನ್ನಾಡಿದರು.
ರಾಜ್ಯದಲ್ಲಿ ನೂತನ ಸರ್ಕಾರದ ಬಂದು ನಾಲ್ಕು ತಿಂಗಳಲ್ಲಿ ನಾವು ನೀಡಿದ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದು ಜನಪರ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ರೈತರಿಗೆ 5 ಲಕ್ಷ ರೂಗಳ ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ಸ್ತ್ರೀ ಶಕ್ತಿ, ಸ್ವಸಹಾಯ ಸಂಘಗಳಿಗೂ ಆರ್ಥಿಕ ನೆರವು ಒದಗಿಸುತ್ತಿದೆ ಎಂದು ಅವರು ಹೇಳಿದರು.
ಇದೇ ವೇಳೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರಾದ ಎ.ಎಸ್ ಪೆÇನ್ನಣ್ಣ ಅವರ ವ್ಯಕ್ತಿತ್ವ, ಜನಪರ ಕಾಳಜಿ ಬಗ್ಗೆ ಕೃಷಿ ಸಚಿವರು ಶ್ಲಾಘಿಸಿದರು.
ಮುಖ್ಯ ಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಅವರು ಕೃಷಿಯ ಪ್ರಾಮುಖ್ಯತೆ, ತಂತ್ರಜ್ಞಾನ ಅಳವಡಿಕೆಯ ಲಾಭ, ರಾಜ್ಯ ಸರ್ಕಾರದ ಜನಪರ ಕಾಳಜಿ ಬಗ್ಗೆ ವಿವರಿಸಿದರು.
ಇದೇ ವೇಳೆ ಸಮಾರಂಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವರನ್ನು ಸನ್ಮಾನಿಸಲಾಯಿತು.
ನಂತರ ಕೃಷಿ ಸಚಿವರು ಕೊಡಗು ಜಿಲ್ಲೆ, ಪೆÇನ್ನಂಪೇಟೆ ಬಳಿ ಇರುವ ಹುದ್ದೂರು ಗ್ರಾಮದಲ್ಲಿ ಕೃಷಿ ಪ್ರಶಸ್ತಿ ವಿಜೇತರಾದ ರವಿಶಂಕರ್ ಅವರ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಭೇಟಿ ನೀಡಿ ವಿವಿಧ ತಳಿಯ ಭತ್ತದ ಬೆಳೆ ವೀಕ್ಷಿಸಿದರು.
ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳಿಗೆ ಆದ್ಯತೆ ಸಿಗುತ್ತಿರುವಾಗ ವಿವಿಧ ತಳಿಗಳ ಭತ್ತ ಬೆಳೆಯುತ್ತಿರುವ ರವಿಶಂಕರ್ ಮತ್ತು ಅವರ ಸಹೋದರರ ಕಾಳಜಿ ಬಗ್ಗೆ ಕೃಷಿ ಸಚಿವರು ಮೆಚ್ಚುಗೆ ವ್ಯಕ್ತ ಪಡಿಸಿದರು.
ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೆÇನ್ನಣ್ಣ, ಕೃಷಿ ನಿರ್ದೇಶಕರಾದ ಡಾ.ಜಿ.ಟಿ ಪುತ್ರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.