i
ಕಾಂತರಾಜು ಆಯೋಗದ ವರದಿಯು ಅವೈಜ್ಞಾನಿಕದಿಂದ ಕೂಡಿದ್ದು ಸರ್ಕಾರ ಒಪ್ಪಬಾರದು-ಒಕ್ಕಲಿಗ ಸಮಾಜ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದುಳಿದ ವರ್ಗಗಳ ಆಯೋಗದ ನಿಕಟಪೂರ್ವ ಅಧ್ಯಕ್ಷ ಹೆಚ್.ಕಾಂತರಾಜ್ ಅ ವರ ನೇತೃತ್ವದಲ್ಲಿ ನಡೆದ ಸಾಮಾಜಿ, ಶೈಕ್ಷಣಕ, ಆರ್ಥಿಕ ಅಧ್ಯಯನ(ಜಾತಿ ಗಣತಿ) ದೋಷಪೂರಿತವಾಗಿದ್ದು ಯಾವುದೇ ಕಾರಣಕ್ಕೂ ಸರ್ಕಾರ ಒಪ್ಪಬಾರದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಡಿಸಿಎಂ ಸೇರಿದಂತೆ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರುಗಳಿಗೆ ತಾಕೀತು ಮಾಡಿದರು.
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಬೆಂಗಳೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಸ್ವಾಮೀಜಿಗಳು ಮಾತನಾಡಿದರು.
ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಂಜಾವದೂತ ಮಹಾ ಸ್ವಾಮೀಜಿ ಮಾತನಾಡಿ, ಒಕ್ಕಲಿಗ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆಗೆ ಸರ್ಕಾರ ಸ್ಪಂಧಿಸಬೇಕು. ಜಾತಿ ಗಣತಿಯನ್ನು ಯಾವುದೇ ಕಾರಣಕ್ಕೂ ಸರ್ಕಾರ ಒಪ್ಪಿಕೊಳ್ಳಬಾರದು ಎಂದು ಒತ್ತಾಯಿಸಿದರು.
ವಿಶ್ವ ಒಕ್ಕಲಿಗ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.
ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಿ. ಎಸ್. ಚೆಲುವರಾಯಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ, ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ, ಗೌರವಾಧ್ಯಕ್ಷ ಕೆಂಚಪ್ಪಗೌಡ, ಸಮಾಜದ ಜನಪ್ರತಿನಿಧಿಗಳು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ನಡೆದ ಸಮಾಜದ ದುಂಡು ಮೇಜಿನ ಸಭೆಯಲ್ಲಿ ಕಾಂತರಾಜು ಆಯೋಗದ ವರದಿಯು ಅವೈಜ್ಞಾನಿಕದಿಂದ ಕೂಡಿರುವುದರಿಂದ ಸರ್ಕಾರ ಈ ವರದಿ ಜಾರಿಗೊಳಿಸಬಾರದೆಂದು ತೀರ್ಮಾನಿಸಲಾಯಿತು. ಪರಮಪೂಜ್ಯ ಶ್ರೀಗಳ ನೇತೃತ್ವದಲ್ಲಿ ಸಮಾಜದ ಸಚಿವರು ಹಾಗೂ ಜನಪ್ರತಿನಿಧಿಗಳು ಒಂದು ವಾರದೊಳಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಾಂತರಾಜ ಆಯೋಗದ ವರದಿಯನ್ನು ಮರುಪರಿಶೀಲಿಸಿ, ಸಾಮಾಜಿಕ ಹಾಗೂ ಶೈಕ್ಷಣಿಕ ಜನಗಣತಿಯನ್ನು ರಾಜ್ಯಾದ್ಯಂತ ಸರ್ವೆ ಮಾಡುವುದರ ಮೂಲಕ ವರದಿಯನ್ನು ಜಾರಿಗೊಳಿಸಬೇಕು ಎಂದು ತಿಳಿಸಿದರು. ಹೋರಾಟ ಸಮಿತಿಯ ಅಧ್ಯಕ್ಷ ಗಾನಂ ಶ್ರೀಕಂಠಯ್ಯ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ಭಾಗವಹಿಸಿದ್ದರು.