i
ಆರೋಗ್ಯಕರ ಹವ್ಯಾಸ ಬೆಳೆಸಿಕೊಂಡಿರುವುದು ಸ್ವಾಗತಾರ್ಹ-ಲಕ್ಷ್ಮಿ ಹೆಬ್ಬಾಳಕ್…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ನಾಗರಿಕರು ಆರೋಗ್ಯಕರ ಹವ್ಯಾಸ ಬೆಳೆಸಿಕೊಂಡಿರುವುದು ಸ್ವಾಗತಾರ್ಹ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕ್ ಮೆಚ್ಚುಗೆ ವ್ಯಕ್ತಪಡಿಸಿದರು.ಬೆಳಗಾವಿ ನಗರದ ಸಿ.ಪಿ.ಎ.ಡ್ ಮೈದಾನದಲ್ಲಿ ಅಗಸ್ತ್ಯ ಪೌಂಡೇಷನ್ ವತಿಯಿಂದ ಹಮ್ಮಿಕೊಂಡಿದ್ದ ಸೀನಿಯರ್ ಸೇವಾ ವಾಕ್ಥಾನ್ ಮತ್ತು ಸೀನಿಯರ್ ಹೆಲ್ಪ್ ಲೈನ್/ಸೇವಾ ಮಿತ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಬೆಳಗಾವಿಯಲ್ಲಿ ಇಂತಹ ಆರೋಗ್ಯಕರ ಹವ್ಯಾಸವನ್ನು ಬೆಳೆಸಿಕೊಂಡಿರುವುದು ಸ್ವಾಗತಾರ್ಹ, ನಮ್ಮ ಬೆಳಗಾವಿಯ ಇಷ್ಟೊಂದು ಜನ, ಇಂತಹ ಒಂದು ಮ್ಯಾರಥಾನ್ ನಲ್ಲಿ ಭಾಗವಹಿಸಿರುವುದನ್ನು ನೋಡಿದರೆ ಬೆಳಗಾವಿ ಆರೋಗ್ಯಕರವಾಗಿದೆ, ಜತೆಗೆ ಮುಂದೆಯೂ ಆರೋಗ್ಯಕರವಾಗಿರುತ್ತೆ ಅಂತಾ ಇವತ್ತು ಖಾತ್ರಿಯಾಗಿದೆ ಎಂದು ತಿಳಿಸಿದರು.
ರಾಜ್ಯದ ಸುಮಾರು ಸ್ಥಳಗಳಲ್ಲಿ ಇವತ್ತು ಮ್ಯಾರಥಾನ್ ಗಳನ್ನು ಆಯೋಜನೆ ಮಾಡುತ್ತಿರುವುದು ಸರ್ವೇಸಾಮಾನ್ಯ, ಅಂತದರಲ್ಲಿ ಎರಡನೇ ರಾಜಧಾನಿ ಎನಿಸಿಕೊಂಡಿರುವ ಬೆಳಗಾವಿಯಲ್ಲಿಯೂ ಸಹ ಇಂತಹ ಆರೋಗ್ಯಕರ ಮ್ಯಾರಥಾನ್ ಇರಬೇಕೆನ್ನುವ ಆಶಯಕ್ಕೆ ತಾವೆಲ್ಲರೂ ಸಾಕ್ಷಿಯಾಗಿದ್ದಿರಿ. ಆರೋಗ್ಯದ ಕಡೆಗೆ ನಾವೆಲ್ಲರೂ ಗಮನ ಕೊಡಬೇಕು, ಮುಂಚೆ ನಮ್ಮ ನೀರು, ವಾತಾವರಣ, ಆಹಾರ ಪದ್ಧತಿ ಬಹಳಷ್ಟು ಆರೋಗ್ಯಕರವಾಗಿತ್ತು, ಆದರೆ ಇತ್ತಿಚಿನ ದಿನಗಳಲ್ಲಿ ಆಹಾರದ ಪದ್ಧತಿಯಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಮಹಾಮಾರಿ ಕೊರೋನಾ ನಂತರ ಆರೋಗ್ಯಕರ ಜೀವನ ಬಹಳಷ್ಟು ಕಷ್ಟಕರವಾಗಿದೆ ಎಂದು ತಿಳಿಸಿದರು. ಇಂತಹ ಸಮಯದಲ್ಲಿ ನಾವು ಯಾರ ಮೇಲೆಯೂ ಅವಲಂಬಿತರಾಗದೇ ನಮ್ಮ ಕಾಲ ಮೇಲೆ ನಾವು ಎನ್ನುವಂತೆ ಇವತ್ತು ಉತ್ತಮ ಆರೋಗ್ಯಕ್ಕಾಗಿ, ಒಳೆಯ ಉಸಿರಾಟಕ್ಕಾಗಿ ಮ್ಯಾರಥಾನ್ ಹಾಗೂ ಮುಂತಾದ ಆರೋಗ್ಯಕರ ಚಟುವಟಿಕೆಗಳಲ್ಲಿ ಭಾಗವಹಿಸೋಣ ಎಂದರು. ವಯಸ್ಸು ಕಳೆದಂತೆ ನಾವೆಲ್ಲರೂ ಮುಪ್ಪಿನ ವಯಸ್ಸಿಗೆ ತೆರಳ್ತಿವಿ, ಆ ಸಮಯದಲ್ಲಿ ನಾವು ಯಾರಿಗೂ ಹೊರೆಯಾಗೋದು ಬೇಡ, ಆರೋಗ್ಯದಿಂದಲೇ ಹಾಗೂ ಪ್ರೀತಿಯಿಂದಲೇ ಮನೆಯಲ್ಲಿ ಹಾಗೂ ಸಮಾಜದಲ್ಲಿರೋಣ. ಈ ಸಮಯದಲ್ಲಿ ಇಲ್ಲಿ ಉಪಸ್ಥಿತರಿರುವ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿ, ಎಲ್ಲರ ಆರೋಗ್ಯವಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳಕ್ ತಿಳಿಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಅಧ್ಯಕ್ಷ ಅಡಿವೆಪ್ಪ ಬೆಂಡಿಗೇರಿ, ಜಿಲ್ಲಾ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಅಧ್ಯಕ್ಷ ಬಸವರಾಜ ಗೋಮಾಡಿ, ಅಗಸ್ತ್ಯ ಪೌಂಡೇಷನ್ ಅಧ್ಯಕ್ಷೆ ಪೂರ್ಣಿಮಾದೇವಿ ಜಗತಾಫ್, ಜೈಭಾರತ ಫೌಂಡೇಶನ್, ಅಶೋಕ ಐರನ್ ಗ್ರುಪ ಹಾಗೂ ಗೋಲ್ಡ್ ಪ್ಲಸ್ ನ ಎಲ್ಲ ಪದಾಧಿಕಾರಿಗಳು, ಬೆಳಗಾವಿ ನಗರದ ಹಿರಿಯ ನಾಗರಿಕರು ಉಪಸ್ಥಿತರಿದ್ದರು.