i
ಆರ್ಥಿಕ ಸ್ಥಿತಿಗತಿಗಳ ಕುರಿತು ಸರ್ಕಾರ ಕೂಡಲೇ ಶ್ವೇತ ಪತ್ರ ಹೊರಡಿಸಲಿ-ಯತ್ನಾಳ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಪ್ರಸಕ್ತ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಕೂಡಲೇ ಕಾಂಗ್ರೆಸ್ ನೇತೃತ್ವದ ಸರ್ಕಾರ ‘ಶ್ವೇತ ಪತ್ರ‘ ಹೊರಡಿಸಲಿ ಎಂದು ಬಿಜೆಪಿ ಮುಖಂಡ, ಶಾಸಕ ಬಸವನಗೌಡ ಆರ್. ಪಾಟೀಲ್ ಯತ್ನಾಳ್ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ, ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುತ್ತಿರುವುದು ಸರ್ಕಾರದ ಅವೈಜ್ಞಾನಿಕ ಗ್ಯಾರಂಟಿ ಸ್ಕೀಮ್ ಗಳಿಂದಲೋ…… ಹಿಂದಿನ ಬಿಜೆಪಿ ಸರ್ಕಾರದಿಂದಲೋ ಎಂದು ಗೊತ್ತಾಗಲಿ… ಹಾಗೆಯೇ, ಗ್ಯಾರಂಟಿ, ಬಿಟ್ಟಿ ಭಾಗ್ಯಗಳಿಗೆ ಹಣ ಹೊಂದಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಎಲ್ಲಿಂದ ಹಣ ಬರುತ್ತದೆ ಎಂದೂ ಸಹ ಸವಿವರವಾಗಿ ಲಿಖಿತ ರೂಪದಲ್ಲಿ ನೀಡಲಿ ಎಂದು ಅವರು ತಾಕೀತು ಮಾಡಿದ್ದಾರೆ.