i
ಭೂ ವಿಜ್ಞಾನಿ ಪ್ರತಿಮಾ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ- ಅಧ್ಯಕ್ಷೆ ರೋಶಿನಿ ಗೌಡ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದ ಪ್ರತಿಮಾ ಅವರನ್ನು ಭೀಕರವಾಗಿ ಕೊಲೆ ಮಾಡಿರುವುದು ನಾಗರಿಕ ಸಮಾಜವೇ ತಲ್ಲಣಗೊಳ್ಳುವಂತೆ ಮಾಡಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕೆಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶಿನಿ ಗೌಡ ಆಗ್ರಹಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಆರೋಪಿಗಳು ಯಾರೇ ಇರಲಿ ಕೂಡಲೇ ಬಂಧಿಸಬೇಕು. ತ್ವರಿತವಾಗಿ ಪ್ರಕರಣದ ವಿಚಾರಣೆ ನಡೆಸಿ ಮುಂದೆ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಎಚ್ಚರಿಕೆಯ ಪಾಠವಾಗುವ ಶಿಕ್ಷೆಯನ್ನು ನೀಡಬೇಕು. ಇಲ್ಲದಿದ್ದರೆ ನಾಳೆ ಇಂತಹ ಹತ್ತು ಹಲವು ಕೃತ್ಯಗಳು ನಡೆಯಬಹುದೆಂದು ಅಧ್ಯಕ್ಷೆ ರೋಶಿನಿ ಗೌಡ ಆತಂಕ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಾಗರಿಕ ಸಮಾಜದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆ, ಸುಲಿಗೆಯಂತಹ ಪ್ರಕರಣಗಳು ನಡೆಯುತ್ತಲೇ ಇವೆ. ನಾವು ಏನೇ ಮಾಡಿದರೂ ಯಾರು ಕೂಡ ನಮ್ಮನ್ನು ಏನೂ ಮಾಡಲಾರರು ಎಂಬ ಉದ್ಧಟತನದಿಂದ ಇಂತಹ ಕೃತ್ಯ ಎಸಗುತ್ತಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಆರೋಪಿಗಳು ಯಾರೇ ಇರಲಿ ಕೂಡಲೇ ಬಂಧಿಸಬೇಕು. ತ್ವರಿತವಾಗಿ ಪ್ರಕರಣದ ವಿಚಾರಣೆ ನಡೆಸಿ ಮುಂದೆ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಎಚ್ಚರಿಕೆ ಪಾಠವಾಗುವ ಶಿಕ್ಷೆಯನ್ನು ನೀಡಬೇಕು. ಇಲ್ಲದಿದ್ದರೆ ನಾಳೆ ಇಂತಹ ಹಲವಾರು ಕೃತ್ಯಗಳು ನಡೆಯಬಹುದೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ನಾಗರಿಕ ಸಮಾಜದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆ, ಸುಲಿಗೆಯಂತಹ ಪ್ರಕರಣಗಳು ನಡೆಯುತ್ತಲೇ ಇವೆ.
ದೆಹಲಿಯಲ್ಲಿ ವೈದ್ಯಕೀಯ ಪಶು ವಿದ್ಯಾರ್ಥಿನಿ ನಿರ್ಭಯ ಕೊಲೆ ಮಾಡಿದ ಆರೋಪಿಗಳನ್ನು ಒಂದೇ ವಾರದಲ್ಲಿ ಪೊಲೀಸರು ಬಂಧಿಸಿದ್ದರು. ಅದೇ ರೀತಿ ದಕ್ಷ ಮತ್ತು ಪ್ರಾಮಾಣಿಕತೆಯಲ್ಲಿ ಕರ್ನಾಟಕ ಪೊಲೀಸರು. ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಎಡೆಮುರಿ ಕಟ್ಟಬೇಕು ಎಂದು ಅಧ್ಯಕ್ಷೆ ರೋಶಿನಿ ಗೌಡ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಆರೋಪಿಗಳ ವಿರುದ್ಧ ವಾದಿಸಲು ವಿಶೇಷ ಸಾರ್ವಜನಿಕ ವಿಚಾರಣಾ ಅಧಿಕಾರಿಗಳನ್ನು. ನಿಯೋಜಿಸಬೇಕು. ಎಷ್ಟು ಸಾಧ್ಯವೋ ಅಷ್ಟು ಬೇಗ ವಿಚಾರಣೆ ನಡೆದು ಆರೋಪಿಗಳಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಮಹಿಳಾ ನೌಕರರು ಕಛೇರಿಗಳಲ್ಲಿ ನಿರ್ಭಯವಾಗಿ ಕಾರ್ಯ ನಿರ್ವಹಿಸಲು ಆತ್ಮಸ್ಥೈರ್ಯ ತುಂಬುವ ಸಲುವಾಗಿ ಕಾನೂನಿನ ಅಡಿಯಲ್ಲಿ ಕಠಿಣ ಕಾನೂನುಗಳ ರಚನೆ, ನೆರವು ಅಗತ್ಯವಿದ್ದು ಈ ಸಂಬಂಧ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಾರ್ಯೋನ್ಮುಖ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧ್ಯಕ್ಷೆ ರೋಶಿನಿ ಗೌಡ ಕಳಕಳಿ ವ್ಯಕ್ತಪಡಿಸಿದ್ದಾರೆ.