i
ತಜ್ಞ ವೈದ್ಯರ ಸೇವೆ ಅಗತ್ಯವಿರುವ ಕೊಳಗೇರಿ ನಿವಾಸಿಗಳಿಗೆ ಸಿಗಲಿ-ಡಾ.ಅಭಿನವ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ತಜ್ಞ ವೈದ್ಯರ ಸೇವೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಅಗತ್ಯವಿರುವ ಕೊಳಗೇರಿ ನಿವಾಸಿಗಳಿಗೆ ಸಿಗುವಂತಾಗಲಿ ಎಂದು ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು.
ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯಲ್ಲಿರುವ ವಾರ್ಡ್ ನಂಬರ್ 13ರ ವೆಂಕಟೇಶ್ವರ ಬಡಾವಣೆ ಕೊಳಗೇರಿ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ರಾಷ್ಟ್ರಿಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ರಾಜ್ಯ ಕೊಳಗೇರಿ ಮಂಡಳಿ ಇವರ ಸಹಕಾರದೊಂದಿಗೆ ಹಮ್ಮಿಕೊಂಡಿದ್ದ ತಜ್ಞ ವೈದ್ಯರ ಆರೋಗ್ಯ ತಪಾಸಣಾ ಶಿಬಿರ ಉದ್ದೇಶಿಸಿ ಅವರು ಮಾತನಾಡಿದರು.
ಚಿತ್ರದುರ್ಗ ತಾಲೂಕಿನ ಮೂರು ನಗರ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಆಯ್ದ ಕೊಳಗೇರಿ ಪ್ರದೇಶಗಳಲ್ಲಿ ಪ್ರತಿ ವರ್ಷ ಆರೋಗ್ಯ ಮಾನದಂಡಗಳನ್ನು ಪರಿಗಣಿಸಿ ನಾಲ್ಕು ಕೊಳಗೇರಿ ಪ್ರದೇಶಗಳಲ್ಲಿ ತಜ್ಞ ವೈದ್ಯರ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಗುತ್ತಿದೆ. ವಿಶೇಷವಾಗಿ ಸೇವಾ ವಂಚಿತರಿಗೆ ಆರೋಗ್ಯ ಸೇವಗಳನ್ನು ಗುರುತಿಸಿ ಸ್ಥಳದಲ್ಲಿಯೇ ತಪಾಸಣೆ ನಡೆಸಿ, ಅಗತ್ಯವಿದ್ದಲ್ಲಿ ಉನ್ನತ ಮಟ್ಟದ ಆಸ್ಪತ್ರೆ ಚಿಕಿತ್ಸೆ ಸರ್ಕಾರದ ಯೋಜನೆ ಅಡಿ ಸಿಗುವಂತೆ ಮಾಡಲಾಗುವುದು ಎಂದರು.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ಮಾತನಾಡಿ, ಆಯುಷ್ಮಾನ್ ಭವ ಯೋಜನೆಯಲ್ಲಿ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ನಿಮ್ಮ ಆಧಾರ್ ಮತ್ತು ಪಡಿತರ ಚೀಟಿಯನ್ನು ನೀಡಿ ನೋಂದಾಯಿಸಿ ಕಾರ್ಡ್ ಪಡೆಯಿರಿ.
ಆಯುಷ್ಮಾನ್ ಭವ ಯೋಜನೆ ಅಡಿಯಲ್ಲಿ ಉನ್ನತ ಮಟ್ಟದ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿಯೂ ಸಹ ಈ ಸೌಲಭ್ಯ ದೊರೆಯುತ್ತದೆ. ಕೊಳಗೇರಿ ಪ್ರದೇಶದ ಜನರು ಇದರ ಸದುಪಯೋಗಪಡಿಸಿಕೊಳ್ಳಿ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ ಮಾತನಾಡಿ, ಬಾಲ್ಯ ವಿವಾಹದಿಂದ ಉಂಟಾಗುವ ಕೌಟುಂಬಿಕ ಸಮಸ್ಯೆಗಳು ವೈಯಕ್ತಿಕ ಸಮಸ್ಯೆಗಳನ್ನು ವಿವರಿಸಿದರು.
ತಪಾಸಣಾ ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ.ಆಯುಷ್, ಡಾ.ವಸುಧ, ಬುದ್ಧನಗರ ಆರೋಗ್ಯ ಕೇಂದ್ರದ ಡಾ.ಸುರೇಂದ್ರ, ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ನಗರ ಆರೋಗ್ಯ ಕೇಂದ್ರದ ಜಿಲ್ಲಾಮಟ್ಟದ ವ್ಯವಸ್ಥಾಪಕ ಅರ್ಜುನ್ ಕರಕಪ್ಪ ಮೇಟಿ, ನಗರಸಭಾ ಸದಸ್ಯರಾದ ತಾರಕೇಶ್ವರಿ, ಕೊಳಗೇರಿ ಮಂಡಳಿಯ ಚಂದ್ರಮ್ಮ, ಶಾಲಾ ಶಿಕ್ಷಕರಾದ ಮಂಜು¼, ನಾಗರಾಜ್, ಅಂಗನವಾಡಿ ಕಾರ್ಯಕರ್ತೆಯರಾದ ರಂಗಮ್ಮ, ಆಶಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗುರುಮೂರ್ತಿ, ಪ್ರಯೋಗಶಾಲ ತಂತ್ರಜ್ಞ ರಜನಿ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿ ಗೀತಾ, ಬುದ್ಧನಗರಬುದ್ಧ ನಗರ ನಗರ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿಗಳು, ಕೊಳಗೇರಿ ನಿವಾಸಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 60 ಜನ ಕೊಳಗೇರಿ ನಿವಾಸಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು.