i
ಪರಿಶಿಷ್ಟರು, ವಿಶೇಷ ಚೇತನರಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಾಯಕನಹಟ್ಟಿ ಪಟ್ಟಣ ಪಂಚಾಯತಿ ವತಿಯಿಂದ 2023-24ನೇ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಅನುದಾನದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷಚೇತನರಿಗೆ ವಿವಿಧ ಸೌಲಭ್ಯ ಮಂಜೂರಾತಿ ಹಾಗೂ ವಿಶೇಷ ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಎಸ್ಎಫ್ಸಿ ಮುಕ್ತನಿಧಿ ಅನುದಾನದಡಿ ಶೇ. 24.10 ರ ಅನುದಾನದಲ್ಲಿ ಎಸ್ಸಿಎಸ್ಪಿ, ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್ಎಸ್ಎಲ್ಸಿ, ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಆಧಾರದ ಮೇರೆಗೆ ವಿಶೇಷ ನೆರವು ನೀಡಲಾಗುವುದು.
ಎಸ್ಎಫ್ಸಿ ಅನುದಾನದಡಿ ಶೇ. 5 ರ ಯೋಜನೆಯಡಿ ಬ್ಯಾಂಕ್ಗಳ ಸಾಲದ ನೆರೆವಿನಿಂದ ಸಣ್ಣ ಉದ್ದಿಮೆಯನ್ನು ಆರಂಭಿಸಲಿಚ್ಚಿಸುವ ವಿಶೇಷಚೇತನ ಸಣ್ಣ ಉದ್ದಿಮೆದಾರರಿಗೆ ಬ್ಯಾಂಕ್ ನಿಂದ ಸಾಲ ಮಂಜೂರು ಮಾಡಿದ ನಂತರ ಬ್ಯಾಂಕ್ ಅಂಡ್ ಸಬ್ಸಿಡಿ ರೂಪದಲ್ಲಿ ಸಾಲ ನೀಡಿದ ಬ್ಯಾಂಕ್ಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು. ಅರ್ಹ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಪಡೆಯಬಹುದು ಎಂದು ನಾಯಕನಹಟ್ಟಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.