i
ರಸ್ತೆ ಅಪಘಾತ ಸ್ಥಳದಲ್ಲೇ ಬೈಕ್ ಸವಾರ ಸಾವು…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಠಾಣಾ ವ್ಯಾಪ್ತಿಯ ತೊರೆಕೋಲಮ್ಮನಹಳ್ಳಿ -ಗುಂತಕೋಲಮ್ಮನಹಳ್ಳಿ ರಸ್ತೆ ಮಧ್ಯದಲ್ಲಿ ಮೋಟಾರ್ ಬೈಕ್ಗೆ ಗೂಡ್ಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಚಳ್ಳಕೆರೆ ನಗರದ ಗಾಂಧಿನಗರದ ನಿವಾಸಿ ಟೈಲ್ಸ್ ಕಾರ್ಮಿಕ ಸಲ್ಮಾನ್ಖಾನ್(೨೬) ಮೃತಪಟ್ಟ ವ್ಯಕ್ತಿಯಾಗಿದ್ದು, ತನ್ನ ಬೈಕ್ ಮೇಲೆ ಚಳ್ಳಕೆರೆಯಿಂದ ನಾಯಕನಹಟ್ಟಿ ಮೂಲಕ ಕೂಡ್ಲಿಗಿ ತಾಲ್ಲೂಕಿನ ಮರಬ ಗ್ರಾಮಕ್ಕೆ ತನ್ನ ಅಕ್ಕನನ್ನು ನೋಡಲು ತೆರಳುತ್ತಿರುವ ಸಂದರ್ಭದಲ್ಲಿ ಎದುರಿಗೆ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸಲ್ಮಾನ್ಖಾನ್ ರಸ್ತೆ ಪಕ್ಕದಲ್ಲಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಅಪಘಾತವೆಸಗಿದ ಗೂಡ್ಸ್ ವಾಹನ ಚಾಲಕ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿರುತ್ತಾನೆ. ಸಲ್ಮಾನ್ಖಾನ್ ಸಹೋದರ ಅಕ್ಮಲ್ ಪೊಲೀಸರಿಗೆ ದೂರು ನೀಡಿದ್ದು, ನಾಯಕನಹಟ್ಟಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.