i
ಇಸ್ರೇಲ್ ಟಮ್ಮಿ ಬೆನ್ ಹೈಮ್ ಹೆಚ್.ಡಿ.ಕುಮಾರಸ್ವಾಮಿ ಭೇಟಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಕ್ಷಿಣ ಭಾರತದ ಇಸ್ರೇಲ್ ಕಾನ್ಸುಲೇಟ್ ಜನರಲ್ ಇಸ್ರೇಲ್-ಭಾರತದಗೌರವಾನ್ವಿತ ಟಮ್ಮಿ ಬೆನ್ ಹೈಮ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಆಗಿದ್ದರು.
ಬಿಡದಿಯ ತೋಟದಲ್ಲಿ ನಡೆದ ಈ ಭೇಟಿಯ ವೇಳೆ ಹೈಮ್ ಅವರ ಜತೆ ಕರ್ನಾಟಕ – ಇಸ್ರೇಲ್ ಬಾಂಧವ್ಯ, ಪರಸ್ವರ ಸಹಭಾಗಿತ್ವ, ಸಹಕಾರ, ಜ್ಞಾನ ತಂತ್ರಜ್ಞಾನ ವಿನಿಮಯ ಸೇರಿದಂತೆ ಹತ್ತು ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ತಿಳಿಸಿದ್ದಾರೆ.ಇದೇ ವೇಳೆ, ಹಮಾಸ್ ವಿರುದ್ಧ ನಡೆಯುತ್ತಿರುವ ಯುದ್ಧ, ಹಮಾಸ್ ವಶದಲ್ಲಿರುವ ಇಸ್ರೇಲ್, ಅಮೆರಿಕ ಸೇರಿ ವಿವಿಧ ದೇಶಗಳ ಮುಗ್ಧ ಒತ್ತೆಯಾಳುಗಳನ್ನು ಬಿಡಿಸಿಕೊಳ್ಳಲು ನಡೆಸಲಾಗುತ್ತಿರುವ ಹೋರಾಟ ಬಗ್ಗೆಯೂ ಅವರು ಮಾಹಿತಿ ನೀಡಿದರು. ಯುದ್ಧಪೀಡಿತ ದೇಶದಲ್ಲಿ ಆದಷ್ಟು ಬೇಗ ಶಾಂತಿ ನೆಲೆಸುವಂತೆ ಆಗಲಿ. ಹಮಾಸ್ ವಶದಲ್ಲಿರುವ ಎಲ್ಲಾ ಒತ್ತೆಯಾಳುಗಳು ಸುರಕ್ಷಿತವಾಗಿ ಬಿಡುಗಡೆಯಾಗಿ ಬರಲಿ ಎಂದು ಈ ವೇಳೆ ಅವರು ಹಾರೈಸಿದ್ದಾರೆ.