i
ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕ ಹೊಸ ಬಾಟಲಿಯಲ್ಲಿ ಹಳೆ ವೈನ್ ತುಂಬಿದಂತಷ್ಟೇ-ಸಚಿವ ಸುಧಾಕರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ನೇಮಕ ವಿಚಾರ ಹೊಸ ಬಾಟಲಿಯಲ್ಲಿ ಹಳೆ ವೈನ್ ತುಂಬಿದಂತಾಗಿದೆ ಅಷ್ಟೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಅವರ ಆಂತರಿಕ ವಿಚಾರ, ನಾವು ಮೂಗು ತೂರಿಸಲ್ಲ. ನಮ್ಮ ಪಕ್ಷದ ಸಿದ್ದಾಂತ ಬೇರೆ, ಅವರ ಪಕ್ಷದ ಸಿದ್ದಾಂತ ಬೇರೆ.ಬಿಜೆಪಿಯವರು ಸಮಾಜ ಹೊಡೆಯುವ ನೀತಿ ಹೊಂದಿದ್ದಾರೆ. ಬಿಜೆಪಿ ನಮ್ಮ ರಾಜ್ಯದಲ್ಲಿ ಅವರ ನೇತೃತ್ವದಲ್ಲಿ ಅಧಿಕಾರ ಪಡೆಯಲ್ಲ ಎಂದು ಸುಧಾಕರ್ ತಿಳಿಸಿದರು.ಡಿ.ಕೆ.ಶಿವಕುಮಾರ್ ಗೆ ವಿಜಯೇಂದ್ರ ಅವರನ್ನ ಕಂಪೇರ್ ಮಾಡ್ಬೇಡಿ.ಅವರ ಅನುಭವ, ತಾಳ್ಮೆ, ಪಕ್ಷ ಸಂಘಟನೆ ಅವರಿಗೆ ಹೊಲಿಕೆ ಸರಿಯಲ್ಲ.ಎಲ್ಲಾ ಜಾತಿಯವರು ನಮ್ಮ ಪಕ್ಷದ ಜೊತೆಗೆ ಇದ್ದಾರೆ ಎಂದು ಹೇಳಿದರು.ಎಸ್.ಟಿ.ಸೋಮಶೇಖರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರುಸೋಮಶೇಖರ್ ನನ್ನ ಆಪ್ತ, ಅವರ ಮೈಯಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ.ಹಲವು ಕಾರಣಗಳಿಂದ ಆಪರೇಷನ್ ಕಮಲಕ್ಕೆ ಹೋಗಿದ್ದರು, ವಾಪಸ್ ಬರುತ್ತಾರೆ. ವಿರೋಧ ಪಕ್ಷದ ನಾಯಕನನ್ನು ಬಿಜೆಪಿ ಇನ್ನೂ ನೇಮಕ ಮಾಡಿಲ್ಲ, ಬಿಜೆಪಿಯಲ್ಲಿ ಅಂತಹ ನಾಯಕರಿಲ್ಲವೇ ಎಂದು ಅವರು ಪ್ರಶ್ನಿಸಿದರು.