![](https://www.chandravallinews.com/wp-content/uploads/2023/11/WhatsApp-Image-2023-09-20-at-9.01.20-AM.jpeg)
i
10 ದಿನಗಳ ಉಚಿತ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2023-24ನೇ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ಇಲಾಖಾ ವ್ಯಾಪ್ತಿಯ ಸಿಡಾಕ್ ಸಂಸ್ಥೆಯ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ಯಮಶೀಲತೆಯ ಬಗ್ಗೆ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಅದರಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನ.30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಹಅಭ್ಯರ್ಥಿಗಳು https://www.scptsp.karnataka.gov.in/BMS/CDOC/EDPRegistrationfrom.aspx ಪೋರ್ಟಲ್ ಮೂಲಕ ನವೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕು.
ನಿಗದಿಪಡಿಸಿರುವ ಅರ್ಹತೆಗಳು: ಕನಿಷ್ಠ 21 ವರ್ಷ ಗರಿಷ್ಠ 50ವರ್ಷ, ಪಿ.ಯು.ಸಿ ಮತ್ತು ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಉದ್ದಿಮೆ, ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ಉತ್ತೇಜನ ಮತ್ತು ಮಾರ್ಗದರ್ಶನ ನೀಡಲು ಉದ್ಯಮಶೀಲತಾ ತರಬೇತಿಯನ್ನು ಆಯೋಜಿಸಲಾಗಿದೆ, ಸರ್ಕಾರದ ವಿವಿಧ ಇಲಾಖೆಗಳಿಂದ ಪರಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಉದ್ದಿಮೆಗಳನ್ನು ಸ್ಥಾಪಿಸಲು ನೀಡಲಾಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು, ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ಗಳು ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳಿಂದ ನೀಡಲಾಗುವ ಸಾಲ ಸೌಲಭ್ಯದ ಮಾಹಿತಿಯನ್ನು ನೀಡಲಾಗವುದು. ಆಯಾ ಜಿಲ್ಲಾ ಕೇಂದ್ರಗಳಲ್ಲಿ ಹತ್ತು ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ತರಬೇತಿಗೆ ಹಾಜರಾಗಲು ಪ್ರತಿ ಅಭ್ಯರ್ಥಿಗೆ ಪ್ರಯಾಣ ಭತ್ಯೆಯಾಗಿ ಹತ್ತು ದಿನಗಳಿಗೆ ರೂ.1000 ಗಳನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.