i
ಕಾಂತರಾಜು ವರದಿಯನ್ನು ಸರ್ಕಾರಕ್ಕೆ ಸಲ್ಲಿಸದೇ ತಿರಸ್ಕರಿಸಲು ಒಕ್ಕಲಿಗ ಸಂಘ ಆಗ್ರಹ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಒಕ್ಕಲಿಗರ ಸಂಘ ಹಾಗೂ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯು ಜಂಟಿಯಾಗಿ ಕಾಂತರಾಜು ಆಯೋಗದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬಾರದೆಂದು ಕರ್ನಾಟಕ ಸರ್ಕಾರದ ಹಿಂದುಳಿದ ಶಾಶ್ವತ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಗಡೆರವರಿಗೆ ಮನವಿ ಸಲ್ಲಿಸಲಾಯಿತು.
ನಿಕಟಪೂರ್ವ ಅಧ್ಯಕ್ಷ ಹೆಚ್.ಕಾಂತರಾಜ್ ವರದಿ ಅವೈಜ್ಞಾನಿಕ ಮತ್ತು ದ್ವೇಷದಿಂದ ಕೂಡಿದ ವರದಿಯಾಗಿದೆ. ಒಕ್ಕಲಿಗ ಜಾತಿ, ಲಿಂಗಾಯಿತ ಜಾತಿಗಳು ಸೇರಿದಂತೆ ಇತರೆ ಜಾತಿಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಅವೈಜ್ಞಾನಿಕವಾಗಿ ವರದಿ ಸಿದ್ದ ಮಾಡಲಾಗಿದೆ ಎಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ತಿಳಿಸಿದರು.ಕೂಡಲೇ ಕಾಂತರಾಜ್ ವರದಿಯನ್ನು ಆಯೋಗ ತಿರಸ್ಕರಿಸಬೇಕು, ಯಾವುದೇ ಒತ್ತಡಕ್ಕೆ ಮಣಿಯಬಾರದು, ವೈಜ್ಞಾನಿಕವಾಗಿ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ಅಧ್ಯಯನ ಮಾಡಿ ಹೊಸದಾಗಿ ವರದಿಯನ್ನು ಆಯೋಗ ನೀಡಲಿ ಎಂದು ನಾಗರಾಜ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು, ಒಕ್ಕಲಿಗ ಸಂಘದ ಅಧ್ಯಕ್ಷ ಡಿ ಹನುಮಂತಯ್ಯ, ಹೋರಾಟ ಸಮಿತಿ ಅಧ್ಯಕ್ಷ ಗಾ.ನಂ. ಶ್ರೀಕಂಠಯ್ಯ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.