i
ಟೆಲಿಸ್ಕೋಪ್ ಉದ್ಘಾಟಿಸಿದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಕೃತಿ ಶಾಲೆಯ ನೂತನ ಟೆಲಿಸ್ಕೋಪ್ ಉದ್ಘಾಟನೆ ಹಾಗೂ ಮಕ್ಕಳಿಗೆ ಹಾಗೂ ಸಾರ್ವಜನಿಕರು ಉಚಿತವಾಗಿ ಆಕಾಶ ವೀಕ್ಷಣೆ ಮಾಡಬಹುದಾಗಿದೆ.
ಚಿತ್ರದುರ್ಗದ ಬಿ ಎಲ್ ಗೌಡ ಲೇಔಟ್ ನಲ್ಲಿರುವ ಪ್ರಕೃತಿ ಶಾಲೆ ಯಲ್ಲಿ ನಡೆದ “ಪ್ರಕೃತಿಯಿಂದ ಬಾನದಾರಿಗೆ” ಆಕಾಶ ವೀಕ್ಷಣೆ ಕಾರ್ಯಕ್ರಮದ ನೇತೃತ್ವವನ್ನು ಹೆಚ್ ಎಸ್ ಟಿ ಸ್ವಾಮಿ ವಹಿಸಿದ್ದರು.
ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರು ಪ್ರಕೃತಿ ಶಾಲೆಯ ನೂತನ ಟೆಲಿಸ್ಕೋಪ್ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಉದ್ಘಾಟನೆಯ ನಂತರ ಶ್ರೀಗಳು ತಮ್ಮ ಹಿತವಚನದಲ್ಲಿ ” ಪ್ರಕೃತಿ ಶಾಲೆಯು ಸರ್ಕಾರಿ ಶಾಲೆಗಳಿಗೆ ಹಾಗೂ ಸಾರ್ವಜನಿಕರಿಗೆ ಟೆಲಿಸ್ಕೋಪ್ ಮುಖಾಂತರ ಆಕಾಶ ವೀಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಕೆಲಸ” ಎಂದು ತಮ್ಮ ಹರ್ಷ ವ್ಯಕ್ತಪಡಿಸಿದರು.
ಉಪನಿರ್ದೇಶಕ ರವಿಶಂಕರ ರೆಡ್ಡಿ ಮಾತನಾಡಿ ಪ್ರಕೃತಿ ಶಾಲೆಯವರು ಅದ್ಭುತ ಕಾರ್ಯಕ್ರಮ ಆಯೋಜಿಸಿದ್ದು ಒಳ್ಳೆಯ ಶಿಕ್ಷಣ ಕೊಡುವ ಶಾಲೆಗಳಿಗೆ ತಮ್ಮ ಸಹಕಾರ ಸದಾ ಇರುವುದು ಎಂಬ ಭರವಸೆಯ ಮಾತುಗಳನ್ನು ಆಡಿದರು. ಆಕಾಶ ವೀಕ್ಷಣೆ-ಹೆಚ್.ಎಸ್.ಟಿ. ಸ್ವಾಮಿ ಮಾತನಾಡಿ, ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು ಎಲ್ಲಾ ಶಾಲೆಯವರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಖಗೋಳ ಶಾಸ್ತ್ರದ ಬಗ್ಗೆ ಮಕ್ಕಳಿಗೆ ಆಸಕ್ತಿ ಉಂಟುಮಾಡುವ ಕೆಲಸ ಮಾಡಬೇಕು ಹಾಗೂ ಪೋಷಕರು ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಪ್ರಕೃತಿ ಶಾಲೆಯ ಅಧ್ಯಕ್ಷ ಎಂ.ಕೆ. ರವೀಂದ್ರ ಅಧ್ಯಕ್ಷತೆ ವಹಿಸಿ ಸಾರ್ವಜನಿಕರಿಗೋಸ್ಕರ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ಬಂದಿದೆ. ಇದೇ ರೀತಿ ಮುಂದೆಯೂ ಸಹ ಪ್ರೋತ್ಸಾಹ ನೀಡಲಾಗುತ್ತದೆ ಎಂದು ತಿಳಿಸಿದರು.
ಶಾಲೆಯ ಕಾರ್ಯದರ್ಶಿ ಎಂ. ಕಾರ್ತಿಕ್ ಮಾತನಾಡಿ ಈ ನೂತನ ಬೃಹತ್ ಟೆಲಿಸ್ಕೋಪ್ ಕೇವಲ ಪ್ರಕೃತಿ ಶಾಲೆಗೆ ಸೀಮಿತವಾಗದೆ ಇತರೆ ಶಾಲೆಗಳಿಗೆ ಸರ್ಕಾರಿ ಶಾಲೆಗಳಿಗೆ ಅಂಗನವಾಡಿ ಮಕ್ಕಳಿಗೆ ಅವಕಾಶ ವಂಚಿತರಿಗೆ ಉಪಯೋಗವಾಗಲೆಂದು ಈ ಒಂದು ಕಾರ್ಯಕ್ರಮ ಆಯೋಜಿಸಲಾಗಿದ್ದು ಸುಮಾರು 2 ಸಾವಿರಕ್ಕೂ ಹೆಚ್ಚು ಮಕ್ಕಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದು ತುಂಬಾ ಸಂತೋಷ ತಂದಿದೆ ಎಂದರು.
ಬೃಹತ್ ಟೆಲಿಸ್ಕೋಪ್ ಮುಖಾಂತರ ಚಂದ್ರ, ಶನಿ ಗ್ರಹ, ಗುರು ಗ್ರಹ ಹಾಗೂ ಬಹು ದೂರದ ನಕ್ಷತ್ರಗಳನ್ನು ಹತ್ತಿರದಿಂದ ನೋಡುವ ಸದಾ ಅವಕಾಶವನ್ನು ಸಾರ್ವಜನಿಕರು ಒಳ್ಳೆಯ ರೀತಿಯಲ್ಲಿ ಸಹಕರಿಸಿ ಉಪಯೋಗ ಪಡೆದುಕೊಂಡಿದ್ದಾರೆಂದು ಹೇಳಿದರು.
ಪ್ರಕೃತಿ ಶಾಲೆಯ ಆಡಳಿತ ಮಂಡಳಿಯವರು, ಶಿಕ್ಷಕ ಹಾಗೂ ಶಿಕ್ಷಕೇತರ ವರ್ಗದವರು ಸಾರ್ವಜನಿಕರು ಭಾಗವಹಿಸಿದ್ದರು.