![](https://www.chandravallinews.com/wp-content/uploads/2023/11/WhatsApp-Image-2023-11-30-at-5.13.11-AM.jpeg)
i
ಕಾಲೇಜ್ ಮಕ್ಕಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ನಡೆಯಿತು…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮಕ್ಕಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ನೆಹರು ಯುವ ಕೇಂದ್ರ, ಚಿತ್ರದುರ್ಗ, ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನದ ವತಿಯಿಂದ “Catch the rain, when it falls , where it falls” ಎನ್ನುವದರ ಬಗ್ಗೆ ಜಲ ಸಂವಾದ ನಡೆಸಿ ಮಕ್ಕಳಿಗೆ ಅರಿವು ಮೂಡಿಸಲು ಮಕ್ಕಳಿಗೆ ಪ್ರಬಂಧ ಭಾಷಣ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ನೀಡಲಾಯಿತು. ಸೋದರಿ ನಿವೇದಿತಾ ಪ್ರತಿಷ್ಠಾನ, ಚಿತ್ರದುರ್ಗದ ಕಾರ್ಯಕರ್ತರು ಮತ್ತು ಯುವ ಮುಖಂಡರು, ಲೇಖಕಿ ಆರ್.ಸಿರಿ, ಉಪನ್ಯಾಸಕ ಧನಂಜಯ,ಕೆ ಭಾಗವಹಿಸಿ ಮಾತನಾಡಿದರು. ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಚಿತ್ತಪ್ಪ ಜಿ ಡಿ. ಅಧ್ಯಕ್ಷತೆ ವಹಿಸಿದ್ದರು.ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಕರಿಯಣ್ಣ,ಡಿ, ಉಪನ್ಯಾಸಕಿ ಮೇಹುರ್, ಶಶಿಕಲಾ, ಕಾಲೇಜಿನ ವಿಜ್ಞಾನ ಕಲಾ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.