![](https://www.chandravallinews.com/wp-content/uploads/2023/12/WhatsApp-Image-2023-12-01-at-4.31.26-PM.jpeg)
i
ರೈತರಿಂದ ಸ್ಪ್ರಿಂಕ್ಲರ್ ಸೆಟ್ಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನಲ್ಲಿ ೨೦೨೩-೨೪ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ತುಂತುರು ನೀರಾವರಿ ಘಟಕ (ಸ್ಪ್ರಿಂಕ್ಲರ್)ಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರ ಅರ್ಜಿ ಫಾರಂನೊಂದಿಗೆ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ ಜೆರಾಕ್ಸ್, ನೀರಾವರಿ ಮೂಲದ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ಹಾಗೂ 3 ಫೋಟೋಗಳೊಂದಿಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ ಕೂಡಲೇ ಅರ್ಜಿ ಸಲ್ಲಿಸಬಹುದು. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ರೈತರು ಕಡ್ಡಾಯವಾಗಿ ಆರ್.ಡಿ ನಂಬರ್ ಹೊಂದಿರುವ ಜಾತಿ ಪ್ರಮಾಣ ಪತ್ರಗಳೊಂದಿಗೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಂ.ವಿ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೂಕ್ಷ್ಮ ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲರ್ ಸೆಟ್ ವಿತರಣೆ
ಕ್ರಸಂ ವಿವರ ರೈತರ ವಂತಿಕೆ ಸಹಾಯಧನ ಒಟ್ಟು ಮೊತ್ತ (ರೂ.ಗಳಲ್ಲಿ)
೧ ೨.೦ ಇಂಚು – ೬೩ ಎಂ.ಎಂ ೪೧೩೯ ೧೯೪೨೯ ೨೧೦೪೩
೨ ೨.೫ ಇಂಚು – ೭೫ ಎಂ.ಎಂ ೪೬೬೭ ೨೧೭೭೫ ೨೩೬೦೯